ಹೆರಿಗೆ ನೋವಿನಿಂದ ಬಳಲುತ್ತಿದ್ದ ಜ್ಯೋತಿ ಅವರನ್ನು ಬುಧವಾರ ತಾಲ್ಲೂಕಿನ ಮನ್ನಾಎಖ್ಖೇಳಿ ಸಮುದಾಯ ಆರೋಗ್ಯ ಕೇಂದ್ರದ 108 ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆ ಜ್ಯೋತಿ ಅವರಿಗೆ ವಿಪರೀತ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಆಂಬುಲೆನ್ಸ್ ಸಿಬ್ಬಂದಿ ಮಡೆಪ್ಪ, ಇಎಂಟಿ ವಿದ್ಯಾಸಾಗರ ಅವರು ಆಂಬುಲೆನ್ಸ್ನ ಒಳಗಡೆಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದರು.