<p>ಬೀದರ್: ‘ಮಾದ್ಯಮ ಇಂದು ಸರ್ಕಾರ ಹಾಗೂ ಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಜಟಿಲವಾದ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮಾಧ್ಯಮಗಳಿಗೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾಗರಿಕ ಸಮಸ್ಯೆಗಳನ್ನು ಸ್ಥಳೀಯ ಆಡಳಿತದ ಗಮನಕ್ಕೆ ತಂದು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸವನ್ನೂ ಮಾಧ್ಯಮ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಡೆನ್ ನೆಟ್ವರ್ಕ್ನ ಮಾಲೀಕ ರವಿ ಸ್ವಾಮಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಪತ್ರಕರ್ತ ದೇವೇಂದ್ರ ಸೋನಿ ಮಾತನಾಡಿದರು.</p>.<p>ಮಹ್ಮದ್ ವಜಹತ್ ಅಲಿಖಾನ್, ಅಬ್ದುಲ್ ಮತೀನ್, ಅಮ್ಜದ್ ಪಾಶಾ, ಮಹ್ಮದ್ ನವಾಜ್, ಆನಂದ, ಸೈಯದ್ ಮುಜಿಬ್ ಅಹ್ಮದ್, ಬಸಯ್ಯಾ ಸ್ವಾಮಿ, ಮಹ್ಮದ್ ಸಲಿಮೋದ್ದೀನ್ ಇದ್ದರು. ಪ್ರರ್ತಕರ್ತ ಸ್ವಾಮಿದಾಸ ನಾಗೂರೆ ಅಧ್ಯಕ್ಷತೆ ವಹಿಸಿದ್ದರು. ಸುಸ್ಮಿತಾ ಮೋರೆ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಮಾದ್ಯಮ ಇಂದು ಸರ್ಕಾರ ಹಾಗೂ ಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಜಟಿಲವಾದ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮಾಧ್ಯಮಗಳಿಗೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾಗರಿಕ ಸಮಸ್ಯೆಗಳನ್ನು ಸ್ಥಳೀಯ ಆಡಳಿತದ ಗಮನಕ್ಕೆ ತಂದು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸವನ್ನೂ ಮಾಧ್ಯಮ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಡೆನ್ ನೆಟ್ವರ್ಕ್ನ ಮಾಲೀಕ ರವಿ ಸ್ವಾಮಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಪತ್ರಕರ್ತ ದೇವೇಂದ್ರ ಸೋನಿ ಮಾತನಾಡಿದರು.</p>.<p>ಮಹ್ಮದ್ ವಜಹತ್ ಅಲಿಖಾನ್, ಅಬ್ದುಲ್ ಮತೀನ್, ಅಮ್ಜದ್ ಪಾಶಾ, ಮಹ್ಮದ್ ನವಾಜ್, ಆನಂದ, ಸೈಯದ್ ಮುಜಿಬ್ ಅಹ್ಮದ್, ಬಸಯ್ಯಾ ಸ್ವಾಮಿ, ಮಹ್ಮದ್ ಸಲಿಮೋದ್ದೀನ್ ಇದ್ದರು. ಪ್ರರ್ತಕರ್ತ ಸ್ವಾಮಿದಾಸ ನಾಗೂರೆ ಅಧ್ಯಕ್ಷತೆ ವಹಿಸಿದ್ದರು. ಸುಸ್ಮಿತಾ ಮೋರೆ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>