ಔರಾದ್ ಮತ್ತು ಕಮಲನಗರ ಆಸ್ಪತ್ರೆಗಳಿಗೆ ಆಮ್ಲಜನಕ ಸಿಲಿಂಡರ್, ಒಬ್ಬರು ವಿಶೇಷ ತಜ್ಞ ವೈದ್ಯರು, ಕಮಲನಗರಕ್ಕೆ ಜಂಬೊ ಸಿಲಿಂಡರ್ ಅಗತ್ಯವಿದೆ ಎಂದು ಅಲ್ಲಿಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಯ್ಯ ಸ್ವಾಮಿ ಸಚಿವರ ಗಮನಕ್ಕೆ ತಂದರು. ಸಚಿವರು ತಕ್ಷಣ ಸಂಬಂಧಿತರ ಜತೆ ಮಾತನಾಡಿ ಆಮ್ಲಜನಕ ಸಿಲಿಂಡರ್ ವ್ಯವಸ್ಥೆ ಮಾಡಿಸಿದರು.