ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಿಂಗಾಯತರ ಸಭೆ ಶೀಘ್ರ’

Last Updated 7 ಸೆಪ್ಟೆಂಬರ್ 2022, 2:17 IST
ಅಕ್ಷರ ಗಾತ್ರ

ಜನವಾಡ: ‘ಸರ್ಕಾರದ ಸೌಲಭ್ಯಗಳನ್ನು ಪಡೆಯುವ ದಿಸೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಬರುವ ದಿನಗಳಲ್ಲಿ ಜಿಲ್ಲೆಯ ಗ್ರಾಮ, ಹೋಬಳಿ ಹಾಗೂ ಜಿಲ್ಲಾ ಮಟ್ಟದಲ್ಲಿ ಲಿಂಗಾಯತರ ಸಭೆ ನಡೆಸಲಾಗುವುದು’ ಎಂದು ನಿವೃತ್ತ ಪ್ರಾಚಾರ್ಯ ಹಣಮಂತರಾವ್ ಮೈಲಾರೆ ಹೇಳಿದರು.

ಬೀದರ್ ತಾಲ್ಲೂಕಿನ ಕಪಲಾಪುರ (ಎ) ಗ್ರಾಮದಲ್ಲಿ ನಡೆದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಲಿಂಗಾಯತ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಲಿಂಗಾಯತರ ರಾಜಕೀಯ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ, ಎಲ್ಲ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ಪಡೆಯಲು ಏನೇನು ಮಾಡಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು. ಮುಖಂಡ ನಾಗಭೂಷಣ ಕಮಠಾಣ, ಮುಖಂಡ ಸೂರ್ಯಕಾಂತ ಯದಲಾಪುರೆ ಮಾತನಾಡಿದರು.ರಮೇಶ್ ಮಾತನಾಡಿದರು. ಪ್ರಮುಖರಾದ ಅಶೋಕ ಪಾಟೀಲ, ಬಾಬುರಾವ್, ಶಿವರಾಜ ಪಾಟೀಲ ಕಪಲಾಪುರ, ಶರಣಪ್ಪ ಮಂಟಲೆ ಗಾದಗಿ ಮೊದಲಾದವರು ಪಾಲ್ಗೊಂಡಿದ್ದರು.

ಅ.2 ರಂದು ಸಂಗೋಳಗಿಯಲ್ಲಿ ಮುಂದಿನ ಸಭೆ ನಡೆಸಲು ತೀರ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT