<p><strong>ಬೀದರ್: </strong>ಸಂಸದ ಭಗವಂತ ಖೂಬಾ ಅಧ್ಯಕ್ಷತೆಯಲ್ಲಿ ಇಲ್ಲಿಯ ಕುಂಬಾರವಾಡದ ಲೀಡ್ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಬ್ಲಾಕ್ ಮಟ್ಟದ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಯಿತು.</p>.<p>‘2021-22ನೇ ಸಾಲಿನಲ್ಲಿ ರೈತರ ನೋಂದಣಿ ಮಾಡಿಸುವುದರಿಂದ ಹಿಡಿದು ಅವರಿಗೆ ಬೆಳೆ ಪರಿಹಾರ ಒದಗಿಸುವವರೆಗೂ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದು ಖೂಬಾ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ರೈತರಲ್ಲಿ ಬ್ಯಾಂಕ್ಗಳ ಬಗ್ಗೆ ವಿಶ್ವಾಸ ಮೂಡುವಂತೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ಸೇವೆ ನೀಡಬೇಕು. ಫಸಲ್ ಬಿಮಾ ಯೋಜನೆ ಅತಿಹೆಚ್ಚು ಪ್ರಚಾರ ಮಾಡಬೇಕು. ಪ್ರಚಾರ ಕೈಗೊಂಡ ವರದಿಯನ್ನು ಮೂರು ದಿನದೊಳಗೆ ನನಗೆ ಸಲ್ಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಪಿ.ಎಂ. ಕಿಸಾನ್ ಯೋಜನೆಯಡಿಯಲ್ಲಿ 8ನೇ ಕಂತಿನಲ್ಲಿ ಒಟ್ಟು 1,78,544 ರೈತರಿಗೆ ₹35.7 ಕೋಟಿ ಜಮಾ ಆಗಿದೆ. ಇನ್ನು ಕೆಲವು ರೈತರಿಗೆ ಖಾತೆ ಸಮಸ್ಯೆ, ಅಧಾರ್ ಸಮಸ್ಯೆಯಿಂದ ಹಣ ಜಮಾ ಆಗಿಲ್ಲ. ಈ ತೊಂದರೆಯನ್ನು ವಾರದೊಳಗೆ ಸರಿಪಡಿಸಬೇಕು’ ಎಂದು ಹೇಳಿದರು.</p>.<p>ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಎಂ. ಕಮತಗಿ ಹಾಗೂ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಸಂಸದ ಭಗವಂತ ಖೂಬಾ ಅಧ್ಯಕ್ಷತೆಯಲ್ಲಿ ಇಲ್ಲಿಯ ಕುಂಬಾರವಾಡದ ಲೀಡ್ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಬ್ಲಾಕ್ ಮಟ್ಟದ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಯಿತು.</p>.<p>‘2021-22ನೇ ಸಾಲಿನಲ್ಲಿ ರೈತರ ನೋಂದಣಿ ಮಾಡಿಸುವುದರಿಂದ ಹಿಡಿದು ಅವರಿಗೆ ಬೆಳೆ ಪರಿಹಾರ ಒದಗಿಸುವವರೆಗೂ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದು ಖೂಬಾ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ರೈತರಲ್ಲಿ ಬ್ಯಾಂಕ್ಗಳ ಬಗ್ಗೆ ವಿಶ್ವಾಸ ಮೂಡುವಂತೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ಸೇವೆ ನೀಡಬೇಕು. ಫಸಲ್ ಬಿಮಾ ಯೋಜನೆ ಅತಿಹೆಚ್ಚು ಪ್ರಚಾರ ಮಾಡಬೇಕು. ಪ್ರಚಾರ ಕೈಗೊಂಡ ವರದಿಯನ್ನು ಮೂರು ದಿನದೊಳಗೆ ನನಗೆ ಸಲ್ಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಪಿ.ಎಂ. ಕಿಸಾನ್ ಯೋಜನೆಯಡಿಯಲ್ಲಿ 8ನೇ ಕಂತಿನಲ್ಲಿ ಒಟ್ಟು 1,78,544 ರೈತರಿಗೆ ₹35.7 ಕೋಟಿ ಜಮಾ ಆಗಿದೆ. ಇನ್ನು ಕೆಲವು ರೈತರಿಗೆ ಖಾತೆ ಸಮಸ್ಯೆ, ಅಧಾರ್ ಸಮಸ್ಯೆಯಿಂದ ಹಣ ಜಮಾ ಆಗಿಲ್ಲ. ಈ ತೊಂದರೆಯನ್ನು ವಾರದೊಳಗೆ ಸರಿಪಡಿಸಬೇಕು’ ಎಂದು ಹೇಳಿದರು.</p>.<p>ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಎಂ. ಕಮತಗಿ ಹಾಗೂ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>