<p><strong>ಬೀದರ್:</strong> ಜಿಲ್ಲೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ ಒಡ್ಡಿರುವ ಕುರಿತು ಚರ್ಚಿಸಲು ನಗರದ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 11ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸುವರು. ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.</p>.<p>ವಸತಿ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಅನೇಕರನ್ನು ಕೈಬಿಟ್ಟಿರುವ ಹಾಗೂ ಅನುದಾನ ತಡೆ ಹಿಡಿದಿರುವ ಕುರಿತು ಚರ್ಚೆ ನಡೆಸಲಾಗುವುದು. ಅನುದಾನ ಬಿಡುಗಡೆಗೆ ಒತ್ತಾಯಿಸಿ ಸಭೆಯ ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪಕ್ಷದ ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ ಒಡ್ಡಿರುವ ಕುರಿತು ಚರ್ಚಿಸಲು ನಗರದ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 11ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸುವರು. ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.</p>.<p>ವಸತಿ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಅನೇಕರನ್ನು ಕೈಬಿಟ್ಟಿರುವ ಹಾಗೂ ಅನುದಾನ ತಡೆ ಹಿಡಿದಿರುವ ಕುರಿತು ಚರ್ಚೆ ನಡೆಸಲಾಗುವುದು. ಅನುದಾನ ಬಿಡುಗಡೆಗೆ ಒತ್ತಾಯಿಸಿ ಸಭೆಯ ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪಕ್ಷದ ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>