ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಾನದಲ್ಲಿ ಮಳಿಗೆ ನಿರ್ಮಾಣಕ್ಕೆ ವಿರೋಧ

Last Updated 13 ಆಗಸ್ಟ್ 2020, 16:30 IST
ಅಕ್ಷರ ಗಾತ್ರ

ಬಸವಕಲ್ಯಾಣ: ಇಲ್ಲಿನ ಐತಿಹಾಸಿಕ ಬಸವ ವನ ಉದ್ಯಾನದಲ್ಲಿ ಮಳಿಗೆ ನಿರ್ಮಾಣಕ್ಕಾಗಿ ಪ್ರಯತ್ನಿಸಲಾಗುತ್ತಿದ್ದು, ಅದನ್ನು ವಿರೋಧಿಸುತ್ತೇನೆ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.

ಉದ್ಯಾನದ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಇಲ್ಲಿ ಕಸಕಡ್ಡಿ ಬೀಳದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯಾರೂ ಇಲ್ಲಿ ಮೂತ್ರ ವಿಸರ್ಜಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಬೇಸಿಗೆಯಲ್ಲಿ ಇಲ್ಲಿ ಬಂದು ಆಸೀನರಾಗಲು ಉತ್ತಮ ನೆರಳು ದೊರಕುವಂತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ತಾವು ಅಲ್ಲಿಗೆ ಹೋಗಿ ಪರಿಶೀಲಿಸಿದ್ದು ಕೆಲವರು ಆವರಣಕ್ಕೆ ಹತ್ತಿಕೊಂಡು ಶೆಡ್ ನಿರ್ಮಿಸಿದ್ದು ಅದನ್ನು ತೆರವುಗೊಳಿಸಬೇಕೆಂದು ಸಂಬಂಧಿತರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT