ಉದ್ಯಾನದ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಇಲ್ಲಿ ಕಸಕಡ್ಡಿ ಬೀಳದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯಾರೂ ಇಲ್ಲಿ ಮೂತ್ರ ವಿಸರ್ಜಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಬೇಸಿಗೆಯಲ್ಲಿ ಇಲ್ಲಿ ಬಂದು ಆಸೀನರಾಗಲು ಉತ್ತಮ ನೆರಳು ದೊರಕುವಂತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ತಾವು ಅಲ್ಲಿಗೆ ಹೋಗಿ ಪರಿಶೀಲಿಸಿದ್ದು ಕೆಲವರು ಆವರಣಕ್ಕೆ ಹತ್ತಿಕೊಂಡು ಶೆಡ್ ನಿರ್ಮಿಸಿದ್ದು ಅದನ್ನು ತೆರವುಗೊಳಿಸಬೇಕೆಂದು ಸಂಬಂಧಿತರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.