<p>ಬೀದರ್: ಮೊಬೈಲ್ ಯುವಕರಲ್ಲಿ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತಿದೆ ಎಂದು ಹುಮನಾಬಾದ್ ತಹಶೀಲ್ದಾರ್ ಪ್ರದೀಪ್ ಸ್ವಾಮಿ ಕಳವಳ ವ್ಯಕ್ತಪಡಿಸಿದರು.<br />ಚಿಟಗುಪ್ಪ ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ನಡೆದ ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕಿನ ಯುವ ಸಂಘಗಳ ಅಭಿವೃದ್ಧಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br />ಮೊಬೈಲ್ ಸಂವಹನ, ಜ್ಞಾನ ವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಮೊಬೈಲ್ನಲ್ಲಿ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳಬಾರದು ಎಂದು ತಿಳಿಸಿದರು.<br />ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಯುವಕರು ಅವುಗಳ ಲಾಭ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೊರಮೆ ಸಲಹೆ ಮಾಡಿದರು.<br />ಗ್ರಾಮಗಳಲ್ಲಿ ಸಮಾನ ಮನಸ್ಕ ಯುವಕರು ಸೇರಿ ಸಂಘಗಳನ್ನು ಕಟ್ಟಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ನಾಯಕತ್ವ ಗುಣವನ್ನೂ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br />ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 18 ರಿಂದ 29 ವರ್ಷದ ಒಳಗಿನ ಯುವಕರು ಸೇರಿಕೊಂಡು ಯುವಕ ಸಂಘಗಳನ್ನು ರಚಿಸಬೇಕು. ಯುವಕ ಸಂಘ ರಚನೆಗೆ ಅಗತ್ಯ ಮಾಹಿತಿಗೆ ತಮ್ಮನ್ನು ಸಂಪರ್ಕಿಸಬಹುದು ಎಂದು ಚಿಟಗುಪ್ಪ ಮತ್ತು ಹುಮನಾಬಾದ್ ತಾಲ್ಲೂಕು ಎನ್ವೈವಿ ಲಕ್ಷ್ಮಣ ಪಿ. ಮಚಕುರೆ ತಿಳಿಸಿದರು.<br />ಚಿಟಗುಪ್ಪ ತಹಶೀಲ್ದಾರ್ ರವೀಂದ್ರ ದಾಮ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯೆ ಪದ್ಮಾವತಿ ಜವಳಿ ಉಪಸ್ಥಿತರಿದ್ದರು. ಭಗತ್ಸಿಂಗ್ ಯುವ ಕ್ರಾಂತಿ ಕಲಾವಿದರ ಸಂಘದ ಅಧ್ಯಕ್ಷೆ ಸಾರಿಕಾ ನಿರೂಪಿಸಿದರು.<br />ನೆಹರೂ ಯುವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಹುಮನಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕಿನ ಗ್ರಾಮಗಳ ಯುವ ಸಂಘಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಮೊಬೈಲ್ ಯುವಕರಲ್ಲಿ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತಿದೆ ಎಂದು ಹುಮನಾಬಾದ್ ತಹಶೀಲ್ದಾರ್ ಪ್ರದೀಪ್ ಸ್ವಾಮಿ ಕಳವಳ ವ್ಯಕ್ತಪಡಿಸಿದರು.<br />ಚಿಟಗುಪ್ಪ ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ನಡೆದ ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕಿನ ಯುವ ಸಂಘಗಳ ಅಭಿವೃದ್ಧಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br />ಮೊಬೈಲ್ ಸಂವಹನ, ಜ್ಞಾನ ವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಮೊಬೈಲ್ನಲ್ಲಿ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳಬಾರದು ಎಂದು ತಿಳಿಸಿದರು.<br />ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಯುವಕರು ಅವುಗಳ ಲಾಭ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೊರಮೆ ಸಲಹೆ ಮಾಡಿದರು.<br />ಗ್ರಾಮಗಳಲ್ಲಿ ಸಮಾನ ಮನಸ್ಕ ಯುವಕರು ಸೇರಿ ಸಂಘಗಳನ್ನು ಕಟ್ಟಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ನಾಯಕತ್ವ ಗುಣವನ್ನೂ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br />ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 18 ರಿಂದ 29 ವರ್ಷದ ಒಳಗಿನ ಯುವಕರು ಸೇರಿಕೊಂಡು ಯುವಕ ಸಂಘಗಳನ್ನು ರಚಿಸಬೇಕು. ಯುವಕ ಸಂಘ ರಚನೆಗೆ ಅಗತ್ಯ ಮಾಹಿತಿಗೆ ತಮ್ಮನ್ನು ಸಂಪರ್ಕಿಸಬಹುದು ಎಂದು ಚಿಟಗುಪ್ಪ ಮತ್ತು ಹುಮನಾಬಾದ್ ತಾಲ್ಲೂಕು ಎನ್ವೈವಿ ಲಕ್ಷ್ಮಣ ಪಿ. ಮಚಕುರೆ ತಿಳಿಸಿದರು.<br />ಚಿಟಗುಪ್ಪ ತಹಶೀಲ್ದಾರ್ ರವೀಂದ್ರ ದಾಮ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯೆ ಪದ್ಮಾವತಿ ಜವಳಿ ಉಪಸ್ಥಿತರಿದ್ದರು. ಭಗತ್ಸಿಂಗ್ ಯುವ ಕ್ರಾಂತಿ ಕಲಾವಿದರ ಸಂಘದ ಅಧ್ಯಕ್ಷೆ ಸಾರಿಕಾ ನಿರೂಪಿಸಿದರು.<br />ನೆಹರೂ ಯುವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಹುಮನಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕಿನ ಗ್ರಾಮಗಳ ಯುವ ಸಂಘಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>