ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮಿಲಪುರಕರ್ ಮಾತನಾಡಿ,‘ಬಿಸಿಯೂಟದ ನೌಕರರಿಗೆ ಏಪ್ರಿಲ್ ತಿಂಗಳಿಂದ ಶಾಲೆ ಪ್ರಾರಂಭ ಆಗುವವರೆಗೆ ವೇತನ ಪಾವತಿ ಮಾಡಬೇಕು. ಮುಂದಿನ ಆರು ತಿಂಗಳವರೆಗೆ ಪಡಿತರ ಸೇರಿದಂತೆ ₹7,500 ಸಹಾಯಧನ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಬಿಸಿಯೂಟದ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಒದಗಿಸಬೇಕು. ಕೋವಿಡ್ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು. ಮತ್ತು ಐಎಲ್ಸಿ ಶಿಫಾರಸ್ಸುಗಳನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.