<p><strong>ಹುಮನಬಾದ್: </strong>ಬಿಸಿಯೂಟ ನೌಕರರಿಗೆ ಎಲ್ಐಸಿ ಆಧಾರಿತ ಪಿಂಚಣಿ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ತಾಲ್ಲೂಕು ಘಟಕದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮಿಲಪುರಕರ್ ಮಾತನಾಡಿ,‘ಬಿಸಿಯೂಟದ ನೌಕರರಿಗೆ ಏಪ್ರಿಲ್ ತಿಂಗಳಿಂದ ಶಾಲೆ ಪ್ರಾರಂಭ ಆಗುವವರೆಗೆ ವೇತನ ಪಾವತಿ ಮಾಡಬೇಕು. ಮುಂದಿನ ಆರು ತಿಂಗಳವರೆಗೆ ಪಡಿತರ ಸೇರಿದಂತೆ ₹7,500 ಸಹಾಯಧನ ಒದಗಿಸಬೇಕು’ ಎಂದು ಒತ್ತಾಯಿಸಿದರು.<br /><br />ಬಿಸಿಯೂಟದ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಒದಗಿಸಬೇಕು. ಕೋವಿಡ್ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು. ಮತ್ತು ಐಎಲ್ಸಿ ಶಿಫಾರಸ್ಸುಗಳನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಯದರ್ಶಿ ಮಂಜುಳಾ ಹಾಲಹಳ್ಳಿ, ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್. ತಾಲ್ಲೂಕು ಉಪಾಧ್ಯಕ್ಷೆ ಜೈಶ್ರೀ ಜಾಧವ ಹಾಗೂ ಕೋಶಾಧ್ಯಕ್ಷೆ ಆರತಿ ಮೇಲಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಬಾದ್: </strong>ಬಿಸಿಯೂಟ ನೌಕರರಿಗೆ ಎಲ್ಐಸಿ ಆಧಾರಿತ ಪಿಂಚಣಿ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ತಾಲ್ಲೂಕು ಘಟಕದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮಿಲಪುರಕರ್ ಮಾತನಾಡಿ,‘ಬಿಸಿಯೂಟದ ನೌಕರರಿಗೆ ಏಪ್ರಿಲ್ ತಿಂಗಳಿಂದ ಶಾಲೆ ಪ್ರಾರಂಭ ಆಗುವವರೆಗೆ ವೇತನ ಪಾವತಿ ಮಾಡಬೇಕು. ಮುಂದಿನ ಆರು ತಿಂಗಳವರೆಗೆ ಪಡಿತರ ಸೇರಿದಂತೆ ₹7,500 ಸಹಾಯಧನ ಒದಗಿಸಬೇಕು’ ಎಂದು ಒತ್ತಾಯಿಸಿದರು.<br /><br />ಬಿಸಿಯೂಟದ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಒದಗಿಸಬೇಕು. ಕೋವಿಡ್ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು. ಮತ್ತು ಐಎಲ್ಸಿ ಶಿಫಾರಸ್ಸುಗಳನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಯದರ್ಶಿ ಮಂಜುಳಾ ಹಾಲಹಳ್ಳಿ, ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್. ತಾಲ್ಲೂಕು ಉಪಾಧ್ಯಕ್ಷೆ ಜೈಶ್ರೀ ಜಾಧವ ಹಾಗೂ ಕೋಶಾಧ್ಯಕ್ಷೆ ಆರತಿ ಮೇಲಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>