<p><strong>ಬೀದರ್:</strong> ಕೋವಿಡ್ ಸೋಂಕಿನ ಕಾರಣ ಈ ಬಾರಿಯ ಭಾಲ್ಕಿ ತಾಲ್ಲೂಕಿನ ಖಾನಾಪುರದ ಐತಿಹಾಸಿಕ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.</p>.<p>ಜಾತ್ರೆ ಡಿಸೆಂಬರ್ 9 ರಿಂದ 2022ರ ಜನವರಿ 9 ರ ವರೆಗೆ ನಡೆಯಲಿದೆ. ಜಾತ್ರೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಕೋವಿಡ್ ಸೋಂಕು ತಡೆಗಟ್ಟುವ ದಿಸೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.</p>.<p>ದೇವಸ್ಥಾನದ ಆಡಳಿತಾಧಿಕಾರಿಯಾದ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಅವರು ನಾಲ್ಕು ಭಾನುವಾರ ಅಂದರೆ ಡಿ. 12, 19, 26 ಹಾಗೂ ಜನವರಿ 2 ರ ಜಾತ್ರೆಯನ್ನು ರದ್ದುಪಡಿಸಿದ್ದಾರೆ. ಈ ದಿನಗಳಂದು ದೇವಸ್ಥಾನ ಪರಿಸರದಲ್ಲಿ ಭಕ್ತರ ಪ್ರವೇಶ, ಕಾಯಂ ಅಂಗಡಿ, ತಾತ್ಕಾಲಿಕ ಅಂಗಡಿ ತೆರೆಯುವುದನ್ನು ನಿರ್ಬಂಧಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ (ಖಂಡೋಬಾ) ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.</p>.<p>ಭಾನುವಾರ ಹೊರತುಪಡಿಸಿ ಉಳಿದ ದಿನ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಭಕ್ತರು ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯಬಹುದು. ಆದರೆ, ವಸತಿಗೆ ಅವಕಾಶ ಇಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೋವಿಡ್ ಸೋಂಕಿನ ಕಾರಣ ಈ ಬಾರಿಯ ಭಾಲ್ಕಿ ತಾಲ್ಲೂಕಿನ ಖಾನಾಪುರದ ಐತಿಹಾಸಿಕ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.</p>.<p>ಜಾತ್ರೆ ಡಿಸೆಂಬರ್ 9 ರಿಂದ 2022ರ ಜನವರಿ 9 ರ ವರೆಗೆ ನಡೆಯಲಿದೆ. ಜಾತ್ರೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಕೋವಿಡ್ ಸೋಂಕು ತಡೆಗಟ್ಟುವ ದಿಸೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.</p>.<p>ದೇವಸ್ಥಾನದ ಆಡಳಿತಾಧಿಕಾರಿಯಾದ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಅವರು ನಾಲ್ಕು ಭಾನುವಾರ ಅಂದರೆ ಡಿ. 12, 19, 26 ಹಾಗೂ ಜನವರಿ 2 ರ ಜಾತ್ರೆಯನ್ನು ರದ್ದುಪಡಿಸಿದ್ದಾರೆ. ಈ ದಿನಗಳಂದು ದೇವಸ್ಥಾನ ಪರಿಸರದಲ್ಲಿ ಭಕ್ತರ ಪ್ರವೇಶ, ಕಾಯಂ ಅಂಗಡಿ, ತಾತ್ಕಾಲಿಕ ಅಂಗಡಿ ತೆರೆಯುವುದನ್ನು ನಿರ್ಬಂಧಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ (ಖಂಡೋಬಾ) ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.</p>.<p>ಭಾನುವಾರ ಹೊರತುಪಡಿಸಿ ಉಳಿದ ದಿನ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಭಕ್ತರು ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯಬಹುದು. ಆದರೆ, ವಸತಿಗೆ ಅವಕಾಶ ಇಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>