<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್ಸಿಪಿಯಿಂದ<br />ಸ್ಪರ್ಧಿಸಿ ನಾಮಪತ್ರ ಹಿಂದಕ್ಕೆ ಪಡೆದು ಬಿಜೆಪಿಗೆ ಬೆಂಬಲಿಸಿರುವ ಮಾಜಿ ಶಾಸಕ ಮಾರುತಿರಾವ್ ಮುಳೆ ಅವರ ಭಾವಚಿತ್ರಕ್ಕೆ ಶಿವಾಜಿ ಪಾರ್ಕ್ನಲ್ಲಿ ಸೋಮವಾರ ಮರಾಠಾ ಸಮಾಜದ ಇನ್ನೊಂದು ಬಣದವರು ಕ್ಷೀರಾಭಿಷೇಕ ಮಾಡಿದರು.</p>.<p>‘ಮುಳೆ ಅವರು ಬಿಜೆಪಿ ಬೆಂಬಲಿಸಿದ್ದನ್ನು ವಿರೋಧಿಸಿ ಕೆಲವರು ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದರು. ಹೀಗಾಗಿ ಕ್ಷೀರಾಭಿಷೇಕ ನಡೆಸಲಾಯಿತು’ ಎಂದು ಮರಾಠಾ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ ತಿಳಿಸಿದ್ದಾರೆ.</p>.<p>‘ನಗರದ ಪಾರ್ಕ್ದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮೊದಲು ಹಾಲು ಮತ್ತು ನೀರಿನಿಂದ ತೊಳೆದು ಪೂಜೆ ಮಾಡಲಾಯಿತು. ನಂತರ ಮುಳೆ ಅವರ ಭಾವಚಿತ್ರ ಶುದ್ಧೀಕರಿಸಲಾಯಿತು. ತದನಂತರ ಸಭೆ ನಡೆಸಿ, ಸಮಾಜದ ಗಣ್ಯ ವ್ಯಕ್ತಿಯನ್ನೇ ಅವಮಾನ ಮಾಡಿದ್ದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು’ ಎಂದು ಹೇಳಿದ್ದಾರೆ.</p>.<p>‘ಮರಾಠಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರ ನೇಮಕಾತಿ ಒಳಗೊಂಡು 6 ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಕೊಂಡಿದ್ದರಿಂದ ಮುಳೆ ಅವರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆದರೆ, ಇದನ್ನು ಸಹಿಸದ ಅನ್ಯ ಪಕ್ಷಗಳಲ್ಲಿನ ಕೆಲ ಮರಾಠರು ಪ್ರತಿಭಟನೆ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>ಮುಳೆ ಬೆಂಬಲಿಗರ ಸಭೆಯಲ್ಲಿ ಮುಖಂಡರಾದ ತಾತೇರಾವ್ ಪಾಟೀಲ, ಜ್ಞಾನೇಶ್ವರ ಮುಳೆ, ಸಂಭಾಜಿ ಜಗತಾಪ, ರಾಜೀವ್ ಭೋಸ್ಲೆ, ವಿಶ್ವನಾಥ ಪಾಟೀಲ ಲಾಡವಂತಿ, ಬಾಲು ಪಾಟೀಲ ಹೊನ್ನಳ್ಳಿ, ಬಾಳಾ ಅಷ್ಟೆ, ದೀಪಕ ನಾಗದೆ, ವಿನಯಕುಮಾರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್ಸಿಪಿಯಿಂದ<br />ಸ್ಪರ್ಧಿಸಿ ನಾಮಪತ್ರ ಹಿಂದಕ್ಕೆ ಪಡೆದು ಬಿಜೆಪಿಗೆ ಬೆಂಬಲಿಸಿರುವ ಮಾಜಿ ಶಾಸಕ ಮಾರುತಿರಾವ್ ಮುಳೆ ಅವರ ಭಾವಚಿತ್ರಕ್ಕೆ ಶಿವಾಜಿ ಪಾರ್ಕ್ನಲ್ಲಿ ಸೋಮವಾರ ಮರಾಠಾ ಸಮಾಜದ ಇನ್ನೊಂದು ಬಣದವರು ಕ್ಷೀರಾಭಿಷೇಕ ಮಾಡಿದರು.</p>.<p>‘ಮುಳೆ ಅವರು ಬಿಜೆಪಿ ಬೆಂಬಲಿಸಿದ್ದನ್ನು ವಿರೋಧಿಸಿ ಕೆಲವರು ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದರು. ಹೀಗಾಗಿ ಕ್ಷೀರಾಭಿಷೇಕ ನಡೆಸಲಾಯಿತು’ ಎಂದು ಮರಾಠಾ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ ತಿಳಿಸಿದ್ದಾರೆ.</p>.<p>‘ನಗರದ ಪಾರ್ಕ್ದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮೊದಲು ಹಾಲು ಮತ್ತು ನೀರಿನಿಂದ ತೊಳೆದು ಪೂಜೆ ಮಾಡಲಾಯಿತು. ನಂತರ ಮುಳೆ ಅವರ ಭಾವಚಿತ್ರ ಶುದ್ಧೀಕರಿಸಲಾಯಿತು. ತದನಂತರ ಸಭೆ ನಡೆಸಿ, ಸಮಾಜದ ಗಣ್ಯ ವ್ಯಕ್ತಿಯನ್ನೇ ಅವಮಾನ ಮಾಡಿದ್ದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು’ ಎಂದು ಹೇಳಿದ್ದಾರೆ.</p>.<p>‘ಮರಾಠಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರ ನೇಮಕಾತಿ ಒಳಗೊಂಡು 6 ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಕೊಂಡಿದ್ದರಿಂದ ಮುಳೆ ಅವರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆದರೆ, ಇದನ್ನು ಸಹಿಸದ ಅನ್ಯ ಪಕ್ಷಗಳಲ್ಲಿನ ಕೆಲ ಮರಾಠರು ಪ್ರತಿಭಟನೆ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>ಮುಳೆ ಬೆಂಬಲಿಗರ ಸಭೆಯಲ್ಲಿ ಮುಖಂಡರಾದ ತಾತೇರಾವ್ ಪಾಟೀಲ, ಜ್ಞಾನೇಶ್ವರ ಮುಳೆ, ಸಂಭಾಜಿ ಜಗತಾಪ, ರಾಜೀವ್ ಭೋಸ್ಲೆ, ವಿಶ್ವನಾಥ ಪಾಟೀಲ ಲಾಡವಂತಿ, ಬಾಲು ಪಾಟೀಲ ಹೊನ್ನಳ್ಳಿ, ಬಾಳಾ ಅಷ್ಟೆ, ದೀಪಕ ನಾಗದೆ, ವಿನಯಕುಮಾರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>