<p><strong>ಘೋಡಂಪಳ್ಳಿ (ಜನವಾಡ):</strong> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮ ಅಡಿಯಲ್ಲಿ ಬೀದರ್ ತಾಲ್ಲೂಕಿನ ಘೋಡಂಪಳ್ಳಿಯಲ್ಲಿ ಮಂಗಳವಾರ ನಡೆದ ಪೌಷ್ಟಿಕ ಆಹಾರ ಮೇಳದಲ್ಲಿ ಸಿರಿಧಾನ್ಯ ಗಮನ ಸೆಳೆದವು.</p>.<p>ನವಣೆ, ಸಜ್ಜೆ, ರಾಗಿ, ಜೋಳ, ಊದಲು, ಸಾಮೆ, ಅರ್ಕ, ಕೂರಲೆ, ಪ್ರದರ್ಶನದಲ್ಲಿದ್ದವು. ರಾಗಿ ಗಂಜಿ, ಮೊಳಕೆ ಕಾಳು, ತರಕಾರಿಗಳನ್ನು ಸಹ ಪ್ರದರ್ಶನಕ್ಕೆ ಇಡಲಾಗಿತ್ತು.</p>.<p>ಮೇಳ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿ ಉದಯಕುಮಾರ ಮಾತನಾಡಿ,‘ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಬಹಳ ಅವಶ್ಯಕವಾಗಿದೆ. ಸಿರಿಧಾನ್ಯಗಳು ಅತ್ಯಧಿಕ ಪೌಷ್ಟಿಕಾಂಶ ಹೊಂದಿವೆ. ಹೀಗಾಗಿ ಅವುಗಳನ್ನು ನಿತ್ಯ ಆಹಾರದ ಭಾಗವಾಗಿಸಬೇಕು’ ಎಂದರು.</p>.<p>ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮಯೂರ ಎನ್.ಟಿ. ಮಾತನಾಡಿ,‘ಅಪೌಷ್ಟಿಕತೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹ, ಮನಸ್ಸು ಉಲ್ಲಸಿತವಾಗಿರುತ್ತದೆ’ ಎಂದು ಹೇಳಿದರು.</p>.<p>ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ, ಜ್ಞಾನ ವಿಕಾಸ ಕಾರ್ಯಕ್ರಮದ ಬೀದರ್ ಗ್ರಾಮಾಂತರ ಸಮನ್ವಯಾಧಿಕಾರಿ ಜಯಸುಧಾ ಮಾತನಾಡಿದರು. ವಲಯ ಮೇಲ್ವಿಚಾರಕ ಮಂಜುನಾಥ, ಎಸ್ತರ್ ರಾಣಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಘೋಡಂಪಳ್ಳಿ (ಜನವಾಡ):</strong> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮ ಅಡಿಯಲ್ಲಿ ಬೀದರ್ ತಾಲ್ಲೂಕಿನ ಘೋಡಂಪಳ್ಳಿಯಲ್ಲಿ ಮಂಗಳವಾರ ನಡೆದ ಪೌಷ್ಟಿಕ ಆಹಾರ ಮೇಳದಲ್ಲಿ ಸಿರಿಧಾನ್ಯ ಗಮನ ಸೆಳೆದವು.</p>.<p>ನವಣೆ, ಸಜ್ಜೆ, ರಾಗಿ, ಜೋಳ, ಊದಲು, ಸಾಮೆ, ಅರ್ಕ, ಕೂರಲೆ, ಪ್ರದರ್ಶನದಲ್ಲಿದ್ದವು. ರಾಗಿ ಗಂಜಿ, ಮೊಳಕೆ ಕಾಳು, ತರಕಾರಿಗಳನ್ನು ಸಹ ಪ್ರದರ್ಶನಕ್ಕೆ ಇಡಲಾಗಿತ್ತು.</p>.<p>ಮೇಳ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿ ಉದಯಕುಮಾರ ಮಾತನಾಡಿ,‘ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಬಹಳ ಅವಶ್ಯಕವಾಗಿದೆ. ಸಿರಿಧಾನ್ಯಗಳು ಅತ್ಯಧಿಕ ಪೌಷ್ಟಿಕಾಂಶ ಹೊಂದಿವೆ. ಹೀಗಾಗಿ ಅವುಗಳನ್ನು ನಿತ್ಯ ಆಹಾರದ ಭಾಗವಾಗಿಸಬೇಕು’ ಎಂದರು.</p>.<p>ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮಯೂರ ಎನ್.ಟಿ. ಮಾತನಾಡಿ,‘ಅಪೌಷ್ಟಿಕತೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹ, ಮನಸ್ಸು ಉಲ್ಲಸಿತವಾಗಿರುತ್ತದೆ’ ಎಂದು ಹೇಳಿದರು.</p>.<p>ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ, ಜ್ಞಾನ ವಿಕಾಸ ಕಾರ್ಯಕ್ರಮದ ಬೀದರ್ ಗ್ರಾಮಾಂತರ ಸಮನ್ವಯಾಧಿಕಾರಿ ಜಯಸುಧಾ ಮಾತನಾಡಿದರು. ವಲಯ ಮೇಲ್ವಿಚಾರಕ ಮಂಜುನಾಥ, ಎಸ್ತರ್ ರಾಣಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>