‘ಸಜ್ಜೆ ಗ್ರಾಮೀಣ ಪ್ರದೇಶದ ಜನತೆಗೆ ಹೆಚ್ಚು ಉಪಯುಕ್ತವಾಗಿದೆ. ಜಾನುವಾರುಗಳಿಗೆ ಸಜ್ಜೆಯನ್ನು ಕುದಿಸಿ ಇಡುತ್ತಾರೆ. ಕುರಿ, ಮೇಕೆಗಳಿಗೆ ಹಾಕುತ್ತಾರೆ ಹಾಗೂ ಊಟಕ್ಕೂ ಉಪಯೋಗಿಸುತ್ತಾರೆ. ಕೊರೊನಾ ವೈರಸ್ ಸಂಕಷ್ಟ ಕಾಲದಲ್ಲಿ ಸಜ್ಜೆ ಬೆಳೆ ನಮಗೆ ಒಪ್ಪತ್ತಿನ ಊಟಕ್ಕೆ ನೆರವಿನ ಅಭಯ ನೀಡಿದೆ. ಮುಂದಿನ ಕೆಲ ದಿನಗಳವರೆಗೂ ನಮಗೆ ಯಾವುದೇ ತೊಂದರೆ ಇಲ್ಲ. ಧಾರಣಿ ನಮ್ಮ ಕೈಗೆಟುಕುತ್ತಿರುವುದರಿಂದ ಒಂದಿಷ್ಟು ಖರೀದಿಸಿ, ಸಂಗ್ರಹಿಸಿ ಇಟ್ಟಿದ್ದೇವೆ’ ಎಂದು ವನದುರ್ಗ ಗ್ರಾಮದ ರೈತ ಮಾನಯ್ಯ ಹೇಳಿದರು.