ಬೀದರ್: ಬೀದರ್ ಜಿಲ್ಲೆಯಲ್ಲಿ ಉದ್ಯಮ ಸ್ಥಾಪಿಸಲು ವಿವಿಧ ಕೈಗಾರಿಕೆಗಳ ಉದ್ಯಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಆಹ್ವಾನ ನೀಡಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೆ ಬುಧವಾರ ಹೈದರಾಬಾದ್ನ ಅಲ್ಪ್ಲಾ ಪ್ಯಾಕೇಜಿಂಗ್ ಕಂಪನಿಗೆ ಭೇಟಿ ನೀಡಿದ ನಂತರ ಇನ್ವೆಸ್ಟ್ ಕರ್ನಾಟಕ ಯೋಜನೆಯಡಿ ಉದ್ಯಮ ಸ್ಥಾಪನೆಗೆ ಆಹ್ವಾನ ನೀಡಿದರು.
ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣ ಇದೆ. ಉತ್ತಮ ರೈಲು ಸಂಪರ್ಕ ಇದೆ. ಕೆಲವೇ ದಿನಗಳಲ್ಲಿ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ಕೂಡ ಆರಂಭವಾಗಲಿದೆ ಎಂದು ತಿಳಿಸಿದರು.
ನಾಲ್ಕಾರು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಬೀದರ್ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವ ಭರವಸೆ ನೀಡಿದರು. ಸಂಸದ ಭಗವಂತ ಖೂಬಾ ಇದ್ದರು.