<p><strong>ಭಾಲ್ಕಿ:</strong> ಅಂತರರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ಬೀದರ್ ಜಿಲ್ಲೆಯ ನಿಶಿಕಾಂತ್ ರಾಜಶೇಖರ ಸಾವಳಗಿ (ಚಿನ್ನದ ಪದಕ), ಪರ್ವೇಜ್ (ಬೆಳ್ಳಿ ಪದಕ ) ಮತ್ತು ತರಬೇತುದಾರ ಸುವಿತ್ ಮೊರೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು.</p>.<p>ನಂತರ ಮಾತನಾಡಿದ ಸಚಿವ ಖಂಡ್ರೆ, ‘ನಮ್ಮ ಭಾಗದ ಯುವಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವ ಮೂಲಕ ಜಿಲ್ಲೆ ಮತ್ತು ರಾಜ್ಯದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಬೆಳಗುತ್ತಿರುವುದು ಹೆಮ್ಮೆಯ ವಿಷಯ. ಯುವಜನತೆ ಕಿಕ್ ಬಾಕ್ಸಿಂಗ್ನಲ್ಲಿ ಹೆಚ್ಚಿನ ಆಸಕ್ತಿ ವಹಿಸಿ, ಸಕ್ರಿಯವಾಗಿ ಪಾಲ್ಗೊಳ್ಳಲು ಪೂರಕ ವಾತಾವರಣ ನಿರ್ಮಿಸಲಾಗುವುದು’ ಎಂದರು.</p>.<p>‘ಯುವಕರು ಕೇವಲ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲದೆ, ಒಲಿಂಪಿಕ್ಸ್ ಮಟ್ಟದವರೆಗೂ ತಲುಪಲು ಅಗತ್ಯ ಆಧುನಿಕ ತರಬೇತಿ ಕೇಂದ್ರ ಹಾಗೂ ಸರ್ಕಾರದ ವತಿಯಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸದ ಸಾಗರ್ ಖಂಡ್ರೆ ಮಾತನಾಡಿ, ‘ಯುವಜನತೆ ಇಂತಹ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬೇಕು’ ಎಂದರು.</p>
<p><strong>ಭಾಲ್ಕಿ:</strong> ಅಂತರರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ಬೀದರ್ ಜಿಲ್ಲೆಯ ನಿಶಿಕಾಂತ್ ರಾಜಶೇಖರ ಸಾವಳಗಿ (ಚಿನ್ನದ ಪದಕ), ಪರ್ವೇಜ್ (ಬೆಳ್ಳಿ ಪದಕ ) ಮತ್ತು ತರಬೇತುದಾರ ಸುವಿತ್ ಮೊರೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು.</p>.<p>ನಂತರ ಮಾತನಾಡಿದ ಸಚಿವ ಖಂಡ್ರೆ, ‘ನಮ್ಮ ಭಾಗದ ಯುವಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವ ಮೂಲಕ ಜಿಲ್ಲೆ ಮತ್ತು ರಾಜ್ಯದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಬೆಳಗುತ್ತಿರುವುದು ಹೆಮ್ಮೆಯ ವಿಷಯ. ಯುವಜನತೆ ಕಿಕ್ ಬಾಕ್ಸಿಂಗ್ನಲ್ಲಿ ಹೆಚ್ಚಿನ ಆಸಕ್ತಿ ವಹಿಸಿ, ಸಕ್ರಿಯವಾಗಿ ಪಾಲ್ಗೊಳ್ಳಲು ಪೂರಕ ವಾತಾವರಣ ನಿರ್ಮಿಸಲಾಗುವುದು’ ಎಂದರು.</p>.<p>‘ಯುವಕರು ಕೇವಲ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲದೆ, ಒಲಿಂಪಿಕ್ಸ್ ಮಟ್ಟದವರೆಗೂ ತಲುಪಲು ಅಗತ್ಯ ಆಧುನಿಕ ತರಬೇತಿ ಕೇಂದ್ರ ಹಾಗೂ ಸರ್ಕಾರದ ವತಿಯಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸದ ಸಾಗರ್ ಖಂಡ್ರೆ ಮಾತನಾಡಿ, ‘ಯುವಜನತೆ ಇಂತಹ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬೇಕು’ ಎಂದರು.</p>