‘ನಾಗಮಾರಪಳ್ಳಿ ಸೋದರರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಐಟಿ ದಾಳಿ’
ಈ ಬಾರಿ ಕ್ಷೇತ್ರದಾದ್ಯಂತ ಖೂಬಾ ವಿರೋಧಿ ಅಲೆ ಇದೆ. ಸೋಲಿನ ಭೀತಿ ಅವರನ್ನು ಕಾಡುತ್ತಿದೆ. ಹೀಗಾಗಿ ನಾಗಮಾರಪಳ್ಳಿ ಸೋದರರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಕೇಂದ್ರ ಬಿಜೆಪಿ ನಾಯಕರ ಎದುರು ಅಂಗಲಾಚಿ ಅವರೇ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ಮಾಡಿಸಿದ್ದಾರೆ’ ಎಂದು ಆರೋಪಿಸಿದರು. ಹಿಂದಿನ ಅವಧಿಯಲ್ಲಿ ಆಗಿರುವ ಹಣ ದುರ್ಬಳಕೆ ಕುರಿತು ನಾನೇ ಸಹಕಾರ ಸಂಘದ ನಿಬಂಧಕರಿಗೆ ದೂರು ನೀಡಿದ್ದೇನೆ. ನನ್ನ ಸಹೋದರ ಅಧ್ಯಕ್ಷರಾಗಿ ಹಿಂದೆ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಂತದಲ್ಲಿ ಐ.ಟಿ. ದಾಳಿ ಮಾಡಿಸಿದರೆ ನಾಗಮಾರಪಳ್ಳಿ ಸೋದರರು ಹೆದರಿಕೊಂಡು ಬಿಜೆಪಿ ಸೇರುತ್ತಾರೆ ಎಂದೇ ಭಗವಂತ ಖೂಬಾ ಈ ನಾಟಕ ಆಡಿದ್ದಾರೆ. ಇದು ಅವರ ನಾಮಪತ್ರ ಸಲ್ಲಿಕೆ ದಿನ ನಾಗಮಾರಪಳ್ಳಿ ಸೋದರರ ಉಪಸ್ಥಿತಿಯೊಂದಿಗೆ ಸಾಬೀತಾಗಿದೆ ಎಂದರು.