ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಬ್ರಿಮ್ಸ್‌ನ ಬಡ ಸ್ವಚ್ಛತಾ ಕಾರ್ಮಿಕರ ಹಣ ಲೂಟಿ ಹೊಡೆದವರಾರು: ಖಂಡ್ರೆ ಪ್ರಶ್ನೆ

Published : 20 ಏಪ್ರಿಲ್ 2024, 14:25 IST
Last Updated : 20 ಏಪ್ರಿಲ್ 2024, 14:25 IST
ಫಾಲೋ ಮಾಡಿ
Comments
‘ನಾಗಮಾರಪಳ್ಳಿ ಸೋದರರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಐಟಿ ದಾಳಿ’
ಈ ಬಾರಿ ಕ್ಷೇತ್ರದಾದ್ಯಂತ ಖೂಬಾ ವಿರೋಧಿ ಅಲೆ ಇದೆ. ಸೋಲಿನ ಭೀತಿ ಅವರನ್ನು ಕಾಡುತ್ತಿದೆ. ಹೀಗಾಗಿ ನಾಗಮಾರಪಳ್ಳಿ ಸೋದರರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಕೇಂದ್ರ ಬಿಜೆಪಿ ನಾಯಕರ ಎದುರು ಅಂಗಲಾಚಿ ಅವರೇ ಡಿಸಿಸಿ ಬ್ಯಾಂಕ್‌ ಮೇಲೆ ದಾಳಿ ಮಾಡಿಸಿದ್ದಾರೆ’ ಎಂದು ಆರೋಪಿಸಿದರು. ಹಿಂದಿನ ಅವಧಿಯಲ್ಲಿ ಆಗಿರುವ ಹಣ ದುರ್ಬಳಕೆ ಕುರಿತು ನಾನೇ ಸಹಕಾರ ಸಂಘದ ನಿಬಂಧಕರಿಗೆ ದೂರು ನೀಡಿದ್ದೇನೆ. ನನ್ನ ಸಹೋದರ ಅಧ್ಯಕ್ಷರಾಗಿ ಹಿಂದೆ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಂತದಲ್ಲಿ ಐ.ಟಿ. ದಾಳಿ ಮಾಡಿಸಿದರೆ ನಾಗಮಾರಪಳ್ಳಿ ಸೋದರರು ಹೆದರಿಕೊಂಡು ಬಿಜೆಪಿ ಸೇರುತ್ತಾರೆ ಎಂದೇ ಭಗವಂತ ಖೂಬಾ ಈ ನಾಟಕ ಆಡಿದ್ದಾರೆ. ಇದು ಅವರ ನಾಮಪತ್ರ ಸಲ್ಲಿಕೆ ದಿನ ನಾಗಮಾರಪಳ್ಳಿ ಸೋದರರ ಉಪಸ್ಥಿತಿಯೊಂದಿಗೆ ಸಾಬೀತಾಗಿದೆ ಎಂದರು.
‘ಖೂಬಾ ವಿರುದ್ಧ ಮಾನನಷ್ಟು ಮೊಕದ್ದಮೆ’
ಭಗವಂತ ಖೂಬಾ ದಲಿತರ ಕುರಿತು ಪ್ರಸ್ತಾಪ ಮಾಡಿದ್ದಾರೆ. ಈ ರೀತಿ ಸುಳ್ಳು ಹೇಳಿ ತೇಜೋ ವಧೆ ಮಾಡುತ್ತಿರುವ ಭಗವಂತ ಖೂಬಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ಈಶ್ವರ ಖಂಡ್ರೆ ಹೇಳಿದರು.
‘ಭೀಮಣ್ಣ ಖಂಡ್ರೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’
‘ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರು ಏಕೀಕರಣದ ನೇತಾರರು ಶತಾಯುಷಿಯ ಬಗ್ಗೆ ಸುಳ್ಳು ಆರೋಪ ಮಾಡ್ತಾರೆ. ಆ ನೈತಿಕತೆ ಅವರಿಗಿಲ್ಲ. ನನ್ನ ತಂದೆ ಭೀಮಣ್ಣ ಖಂಡ್ರೆ ಅವರು ಸಾರಿಗೆ ಸಚಿವರಾಗಿದ್ದಾಗ ನಕಲಿ ಬಸ್ ಟಿಕೆಟ್ ಹಗರಣವನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಕೊಡಿಸಿದರು. ಸದನದ ಕಲಾಪದಲ್ಲಿ ಈ ಎಲ್ಲದರ ಬಗ್ಗೆಯೂ ಉಲ್ಲೇಖ ಇದೆ. ಹೋಗಿ ಅದನ್ನು ತೆಗೆಸಿ ನೋಡಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT