‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಬಗ್ಗೆ ಕಾಳಜಿ ವಹಿಸಿ ಏಪ್ರಿಲ್ನಲ್ಲಿ ಸಾಕಷ್ಟು ಪಡಿತರ ಕೊಟ್ಟಿವೆ. ಬಿಪಿಎಲ್, ಎಪಿಎಲ್, ಅಂತ್ಯೋದಯ ಸೇರಿದಂತೆ ಪಡಿತರ ಚೀಟಿ ಇಲ್ಲದವರಿಗೆ ಮತ್ತು ವಲಸಿಗರಿಗೆ ಸಮರ್ಪಕವಾಗಿ ಪಡಿತರ ತಲುಪಬೇಕು. ಪಡಿತರಕ್ಕೆ ಸರ್ಕಾರಗಳು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ನಾವು ಕೊಡುವ ಆಹಾರ ಧಾನ್ಯಗಳು ಹೇಗಿವೆ ಎಂದು ನೋಡಲು ಪ್ರವಾಸ ನಡೆಸಿದ್ದೇನೆ. ಮಕ್ಕಳಿಗೆ ಕಳಪೆ ಆಹಾರ ಪೂರೈಸಿದರೆ ಸಹಿಸುವುದಿಲ್ಲ. ಎಲ್ಲಾದರೂ ಕಳಪೆ ಆಹಾರ ಧಾನ್ಯ ಪೂರೈಸುವುದು ಕಂಡು ಬಂದರೆ ತಮಗೆ ಮಾಹಿತಿ ಕೊಡಬೇಕು’ ಎಂದರು.