<p><strong>ಬೀದರ್</strong>: ‘ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದ ಮೊದಲ ಯೋಜನೆಯಾಗಿದೆ. ಈ ಪ್ರವಾಸೋದ್ಯಮವು ಸಾರ್ವಜನಿಕರನ್ನು ಕೈಬಿಸಿ ಕರೆಯುವಂತಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್ಡಿಬಿ) ಯೋಜನೆಯಡಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.</p>.<p>‘ಸುಮಾರು ₹15 ಕೋಟಿ ವೆಚ್ಚದಲ್ಲಿ ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆಯ ಕ್ರಿಯೆಯೋಜನೆಯನ್ನು ಸಿದ್ಧಪಡಿಸಲಾಗಿದೆ. ಕೆಕೆಆರ್ಡಿಬಿ ಯೋಜನೆಯಡಿಯಲ್ಲಿ ಸುಮಾರು ₹13.50 ಕೋಟಿ ಹಣವನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಈ ಕಾಮಗಾರಿಯಿಂದ ಸ್ಥಳೀಯರಿಗೆ ಹಲವು ಲಾಭಗಳು ದೊರೆಯಲಿವೆ’ ಎಂದು ಹೇಳಿದರು.</p>.<p>‘ಯೋಜನೆ ಅಡಿಯಲ್ಲಿ ಪ್ರವಾಸಿಗರಿಗಾಗಿ ಕಲ್ಯಾಣಿಗಳ ಪುನರ್ಚೇತನ, ದೋಣಿಯಲಿ ತರಗತಿ, ನಕ್ಷತ್ರ ವೀಕ್ಷಣೆ, ಕಾವಲು ಗೋಪುರ, ಮಾಹಿತಿ ಕೇಂದ್ರ, ಝರಿಗಳ ಪುನಶ್ಚೇತನ, ಶಿಬಿರದ ವಸತಿಗಳು ಸೇರಿದಂತೆ 5 ಕಿ.ಮೀ ಸೈಕ್ಲಿಂಗ್ ವ್ಯವಸ್ಥೆ ಕೂಡ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ವಿಭಾಗೀಯ ಅರಣ್ಯ ಅಧಿಕಾರಿ ವಾನತಿ ಎಂ.ಎಂ., ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ ಕನಕಟ್ಟಾ, ವಲಯ ಅರಣ್ಯಧಿಕಾರಿ ಮಹೇಂದ್ರಕುಮಾರ ಮೋರೆ, ವಿನಯಕುಮಾರ ಮಾಳಗೆ, ರಾಜಕುಮಾರ ಪಾಟೀಲ, ಸತೀಶಕುಮಾರ, ವಿಜಯಕುಮಾರ ಜಾಧವ, ಶ್ರೀಕಾಂತ ರಾಠೋಡ, ಸಂತೋಷ ಸುತಾರ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದ ಮೊದಲ ಯೋಜನೆಯಾಗಿದೆ. ಈ ಪ್ರವಾಸೋದ್ಯಮವು ಸಾರ್ವಜನಿಕರನ್ನು ಕೈಬಿಸಿ ಕರೆಯುವಂತಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್ಡಿಬಿ) ಯೋಜನೆಯಡಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.</p>.<p>‘ಸುಮಾರು ₹15 ಕೋಟಿ ವೆಚ್ಚದಲ್ಲಿ ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆಯ ಕ್ರಿಯೆಯೋಜನೆಯನ್ನು ಸಿದ್ಧಪಡಿಸಲಾಗಿದೆ. ಕೆಕೆಆರ್ಡಿಬಿ ಯೋಜನೆಯಡಿಯಲ್ಲಿ ಸುಮಾರು ₹13.50 ಕೋಟಿ ಹಣವನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಈ ಕಾಮಗಾರಿಯಿಂದ ಸ್ಥಳೀಯರಿಗೆ ಹಲವು ಲಾಭಗಳು ದೊರೆಯಲಿವೆ’ ಎಂದು ಹೇಳಿದರು.</p>.<p>‘ಯೋಜನೆ ಅಡಿಯಲ್ಲಿ ಪ್ರವಾಸಿಗರಿಗಾಗಿ ಕಲ್ಯಾಣಿಗಳ ಪುನರ್ಚೇತನ, ದೋಣಿಯಲಿ ತರಗತಿ, ನಕ್ಷತ್ರ ವೀಕ್ಷಣೆ, ಕಾವಲು ಗೋಪುರ, ಮಾಹಿತಿ ಕೇಂದ್ರ, ಝರಿಗಳ ಪುನಶ್ಚೇತನ, ಶಿಬಿರದ ವಸತಿಗಳು ಸೇರಿದಂತೆ 5 ಕಿ.ಮೀ ಸೈಕ್ಲಿಂಗ್ ವ್ಯವಸ್ಥೆ ಕೂಡ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ವಿಭಾಗೀಯ ಅರಣ್ಯ ಅಧಿಕಾರಿ ವಾನತಿ ಎಂ.ಎಂ., ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ ಕನಕಟ್ಟಾ, ವಲಯ ಅರಣ್ಯಧಿಕಾರಿ ಮಹೇಂದ್ರಕುಮಾರ ಮೋರೆ, ವಿನಯಕುಮಾರ ಮಾಳಗೆ, ರಾಜಕುಮಾರ ಪಾಟೀಲ, ಸತೀಶಕುಮಾರ, ವಿಜಯಕುಮಾರ ಜಾಧವ, ಶ್ರೀಕಾಂತ ರಾಠೋಡ, ಸಂತೋಷ ಸುತಾರ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>