<p><strong>ಬೀದರ್:</strong> ನಗರದ ಬ್ರಿಮ್ಸ್ ಲ್ಯಾಬ್ ಟೆಕ್ನಿಶಿಯನ್ ನಿಲೋಫರ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.</p>.<p>‘ಯುವತಿಗೆ ಐದಾರು ತಿಂಗಳಿಂದ ವೇತನ ಪಾವತಿಸಿಲ್ಲ. ಮಾನಸಿಕ ಹಿಂಸೆ ನೀಡಿ, ಕೊಲೆಗೂ ಯತ್ನಿಸಲಾಗಿದೆ’ ಎಂಬ ಆರೋಪ ಇದೆ. ಫೆ. 27ರಂದು ಯುವತಿ 15 ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಬಳಿಕ ಅವರನ್ನು ಬ್ರಿಮ್ಸ್ಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.</p>.<p>ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ರಹೀಂ ಖಾನ್ ಅವರು, ಯುವತಿಗೆ ವೈಯಕ್ತಿಕವಾಗಿ ₹50 ಸಾವಿರ ಆರ್ಥಿಕ ನೆರವು ನೀಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.</p>.<p>ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.</p>.<p>ಮುಗ್ಧರಿಗೆ ಕಿರುಕುಳ ಕೊಡುವ ದುಷ್ಟರ ಗ್ಯಾಂಗ್ ಬ್ರಿಮ್ಸ್ನಲ್ಲಿದೆ. ಮಹಿಳಾ ನೌಕರರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಅನೇಕರು ದೂರು ಕೊಡಲು ಹಿಂಜರಿಯುತ್ತಿದ್ದಾರೆ ಎಂದು ಸಚಿವರಿಗೆ ವಿವರಿಸಿದರು.</p>.<p>ನಿಲೋಫರ್ ಅವರು ತಾಲ್ಲೂಕಿನ ಅಮಲಾಪೂರದ ನಿವಾಸಿಯಾಗಿದ್ದು, ತನ್ನ ತಾಯಿಯೊಂದಿಗೆ ಚೌಬಾರದಲ್ಲಿ ವಾಸಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಬ್ರಿಮ್ಸ್ ಲ್ಯಾಬ್ ಟೆಕ್ನಿಶಿಯನ್ ನಿಲೋಫರ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.</p>.<p>‘ಯುವತಿಗೆ ಐದಾರು ತಿಂಗಳಿಂದ ವೇತನ ಪಾವತಿಸಿಲ್ಲ. ಮಾನಸಿಕ ಹಿಂಸೆ ನೀಡಿ, ಕೊಲೆಗೂ ಯತ್ನಿಸಲಾಗಿದೆ’ ಎಂಬ ಆರೋಪ ಇದೆ. ಫೆ. 27ರಂದು ಯುವತಿ 15 ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಬಳಿಕ ಅವರನ್ನು ಬ್ರಿಮ್ಸ್ಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.</p>.<p>ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ರಹೀಂ ಖಾನ್ ಅವರು, ಯುವತಿಗೆ ವೈಯಕ್ತಿಕವಾಗಿ ₹50 ಸಾವಿರ ಆರ್ಥಿಕ ನೆರವು ನೀಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.</p>.<p>ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.</p>.<p>ಮುಗ್ಧರಿಗೆ ಕಿರುಕುಳ ಕೊಡುವ ದುಷ್ಟರ ಗ್ಯಾಂಗ್ ಬ್ರಿಮ್ಸ್ನಲ್ಲಿದೆ. ಮಹಿಳಾ ನೌಕರರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಅನೇಕರು ದೂರು ಕೊಡಲು ಹಿಂಜರಿಯುತ್ತಿದ್ದಾರೆ ಎಂದು ಸಚಿವರಿಗೆ ವಿವರಿಸಿದರು.</p>.<p>ನಿಲೋಫರ್ ಅವರು ತಾಲ್ಲೂಕಿನ ಅಮಲಾಪೂರದ ನಿವಾಸಿಯಾಗಿದ್ದು, ತನ್ನ ತಾಯಿಯೊಂದಿಗೆ ಚೌಬಾರದಲ್ಲಿ ವಾಸಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>