‘ಕೃಷಿ ಜಮೀನನ್ನು ಕೃಷಿಯೇತರ ಜಮೀನಾಗಿ ಪರಿವರ್ತಿಸಲು ಅನೇಕ ಅಡೆತಡೆಗಳು ಎದುರಾಗುತ್ತಿವೆ. 79ಎಬಿ ತೆಗೆದು ಮಧ್ಯವರ್ತಿಗಳ ಹಾವಳಿ ತಡೆಯಲು ಹಾಗೂ ವಿಳಂಬವಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದ. ಕಂದಾಯ ಕಚೇರಿಗಳಲ್ಲಿ ಬಾಕಿ ಉಳಿದಿರುವ ಕಡತಗಳ ವಿಲೇವಾರಿಗೆ ಜಿಲ್ಲಾಧಿಕಾರಿಗೆ ಎರಡು ವಾರಗಳ ಅವಕಾಶ ಕೊಡಲಾಗಿದೆ. ಯಾವುದೇ ಕಡತಗಳು ಕಚೇರಿಗಳಲ್ಲಿ ವಿಲೇವಾರಿ ಆಗದೇ ಉಳಿದುಕೊಳ್ಳಬಾರದು ’ ಎಂದರು.