<p><strong>ಬೀದರ್: </strong>ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಮಂಗಳವಾರ ಇಲ್ಲಿಯ ಗೋರನಳ್ಳಿ ಸಮೀಪದ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದರು.</p>.<p>ಚಾಲನೆಯಲ್ಲಿದ್ದ ಕೊಳಚೆ ನೀರು ಶುದ್ಧೀಕರಣ ಘಟಕ ವೀಕ್ಷಣೆ ಮಾಡಿ ಬಳಿಕ, ಹತ್ತಿರದಲ್ಲೇ ಇರುವ ಹಳೆ ಕೊಳಚೆ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಸಂಚರಿಸಿದರು.</p>.<p>ಅಲ್ಲಿ ಮುಳ್ಳಿನ ಗಿಡಗಳು ಬೆಳೆದು ನಿಂತ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದ ಅವರು, ತಾಂತ್ರಿಕ ತೊಂದರೆಯನ್ನು ಬರುವ ಆರು ತಿಂಗಳೊಳಗೆ ಸರಿಪಡಿಸಬೇಕು ಎಂದು ಕೆಯುಐಎಫ್ಡಿಸಿಯ ಎಂಜಿನಿಯರ್ಗೆ ಗಡುವು ವಿಧಿಸಿದರು.</p>.<p>ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಹೋಗಲು ಅಳವಡಿಸಿದ ಸೆಫ್ಟಿಕ್ ಟ್ಯಾಂಕ್ನಿಂದ ನೀರು ಪೋಲಾಗುತ್ತಿರುವುದನ್ನು ಗಮನಿಸಿ, ಕೆಯುಐಎಫ್ಡಿಸಿ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಾರದೊಳಗೆ ಸೆಫ್ಟಿಕ್ ಟ್ಯಾಂಕ್ನ್ನು ಸರಿಪಡಿಸಲು ನಿರ್ದೇಶನ ನೀಡಿದರು.</p>.<p class="Subhead">ಪ್ರಗತಿ ಪರಿಶೀಲನೆ: ಸಚಿವ ಬಿ.ಎ. ಬಸವರಾಜ ಅವರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ವಸತಿ ಯೋಜನೆಗಳು, ಆರ್ಥಿಕ ಸಂಪನ್ಮೂಲ ಮತ್ತಿತರ ವಿಷಯಗಳ ಪರಿಶೀಲನೆ ನಡೆಸಿದರು.</p>.<p class="Subhead">ಆನ್ಲೈನ್ ಮೂಲಕ ಕೃಷಿ ಜಮೀನುಗಳಿಗೆ ಕೃಷಿಯೇತರ ಜಮೀನುಗಳಾಗಿ ಭೂ ಪರಿವರ್ತಿಸಲು ತಾಂತ್ರಿಕ ಅಭಿಪ್ರಾಯ ನೀಡುವ, ಖಾಸಗಿ ಬಡಾವಣೆಗಳ ವಿನ್ಯಾಸ ಅನುಮೋದನೆ, ಪ್ರಾಧಿಕಾರದಿಂದ ವಸತಿ ಯೋಜನೆ ರೂಪಿಸಿ ನಿವೇಶನ ಹಂಚಿಕೆ ಮಾಡುವ ಕುರಿತು ಪ್ರಾಧಿಕಾರದ ಆಯುಕ್ತ ಶರಣಬಸಪ್ಪ ಕೋಟಪ್ಪಗೋಳ ಮಾಹಿತಿ ನೀಡಿದರು.</p>.<p>ಬೀದರ್ನಲ್ಲಿ ಈಗಾಗಲೇ ಚಿದ್ರಿ ಮತ್ತು ನೌಬಾದ್ ಗ್ರಾಮಗಳ ಎರಡು ಬಡಾವಣೆಗಳಲ್ಲಿ ವಸತಿ ಯೋಜನೆಗಳು ಅನುಷ್ಠಾನಗೊಂಡಿವೆ. ಹೊಸದಾಗಿ ಗೋರನಳ್ಳಿ (ಬಿ) ಗ್ರಾಮದಲ್ಲಿ ವಸತಿ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸುವ ಹೊಣೆಯನ್ನು ನಗರಾಭಿವೃದ್ಧಿ ಕೋಶಕ್ಕೆ ವಹಿಸಲಾಗಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದರು.</p>.<p class="Subhead"><strong>ಶಾಸಕರ ಅಸಮಾಧಾನ:</strong> ಬೀದರ್ ನಗರದಲ್ಲಿ ಒಳಚರಂಡಿ ಕಾಮಗಾರಿ ಸರಿಯಾಗಿಲ್ಲ. ಸಮರ್ಪಕ ನಿರ್ವಹಣೆಯೂ ಆಗುತ್ತಿಲ್ಲ. ಉದ್ಯಾನಗಳು ಅತಿಕ್ರಮಣವಾಗಿವೆ. ಒಳ ಚರಂಡಿ ಕಾಮಗಾರಿಗಾಗಿ ಅಗೆದ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಲ್ಲ ಎಂದು ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್ ಹಾಗೂ ಅರವಿಂದಕುಮಾರ ಅರಳಿ ಅಸಮಾಧಾನ ವ್ಯಕ್ತಪಡಿಸಿದರು.</p>.<p class="Subhead">ಈ ವೇಳೆ ಮಾತನಾಡಿದ ಸಚಿವರು, ‘ನಗರದಲ್ಲಿನ ಯುಜಿಡಿ ಮತ್ತು ಉದ್ಯಾನಗಳ ನಿರ್ವಹಣೆ ಸಮರ್ಪಕವಾಗಿ ನಡೆಯಲು ಕ್ರಮ ವಹಿಸಬೇಕು. ನಗರೋತ್ಥಾನ ಹಂತ 3ರಲ್ಲಿನ ನೂನ್ಯತೆಗಳನ್ನು ಸರಿಪಡಿಸಬೇಕು. ಕೆಯುಐಡಿಎಫ್ಸಿನ ಎಂಜಿನಿಯರ್ ವಾರದಲ್ಲಿ ಮೂರು ದಿನಗಳ ಕಾಲ ಬೀದರ್ನಲ್ಲಿದ್ದು ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಶಾಸಕ ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಮಂಗಳವಾರ ಇಲ್ಲಿಯ ಗೋರನಳ್ಳಿ ಸಮೀಪದ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದರು.</p>.<p>ಚಾಲನೆಯಲ್ಲಿದ್ದ ಕೊಳಚೆ ನೀರು ಶುದ್ಧೀಕರಣ ಘಟಕ ವೀಕ್ಷಣೆ ಮಾಡಿ ಬಳಿಕ, ಹತ್ತಿರದಲ್ಲೇ ಇರುವ ಹಳೆ ಕೊಳಚೆ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಸಂಚರಿಸಿದರು.</p>.<p>ಅಲ್ಲಿ ಮುಳ್ಳಿನ ಗಿಡಗಳು ಬೆಳೆದು ನಿಂತ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದ ಅವರು, ತಾಂತ್ರಿಕ ತೊಂದರೆಯನ್ನು ಬರುವ ಆರು ತಿಂಗಳೊಳಗೆ ಸರಿಪಡಿಸಬೇಕು ಎಂದು ಕೆಯುಐಎಫ್ಡಿಸಿಯ ಎಂಜಿನಿಯರ್ಗೆ ಗಡುವು ವಿಧಿಸಿದರು.</p>.<p>ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಹೋಗಲು ಅಳವಡಿಸಿದ ಸೆಫ್ಟಿಕ್ ಟ್ಯಾಂಕ್ನಿಂದ ನೀರು ಪೋಲಾಗುತ್ತಿರುವುದನ್ನು ಗಮನಿಸಿ, ಕೆಯುಐಎಫ್ಡಿಸಿ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಾರದೊಳಗೆ ಸೆಫ್ಟಿಕ್ ಟ್ಯಾಂಕ್ನ್ನು ಸರಿಪಡಿಸಲು ನಿರ್ದೇಶನ ನೀಡಿದರು.</p>.<p class="Subhead">ಪ್ರಗತಿ ಪರಿಶೀಲನೆ: ಸಚಿವ ಬಿ.ಎ. ಬಸವರಾಜ ಅವರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ವಸತಿ ಯೋಜನೆಗಳು, ಆರ್ಥಿಕ ಸಂಪನ್ಮೂಲ ಮತ್ತಿತರ ವಿಷಯಗಳ ಪರಿಶೀಲನೆ ನಡೆಸಿದರು.</p>.<p class="Subhead">ಆನ್ಲೈನ್ ಮೂಲಕ ಕೃಷಿ ಜಮೀನುಗಳಿಗೆ ಕೃಷಿಯೇತರ ಜಮೀನುಗಳಾಗಿ ಭೂ ಪರಿವರ್ತಿಸಲು ತಾಂತ್ರಿಕ ಅಭಿಪ್ರಾಯ ನೀಡುವ, ಖಾಸಗಿ ಬಡಾವಣೆಗಳ ವಿನ್ಯಾಸ ಅನುಮೋದನೆ, ಪ್ರಾಧಿಕಾರದಿಂದ ವಸತಿ ಯೋಜನೆ ರೂಪಿಸಿ ನಿವೇಶನ ಹಂಚಿಕೆ ಮಾಡುವ ಕುರಿತು ಪ್ರಾಧಿಕಾರದ ಆಯುಕ್ತ ಶರಣಬಸಪ್ಪ ಕೋಟಪ್ಪಗೋಳ ಮಾಹಿತಿ ನೀಡಿದರು.</p>.<p>ಬೀದರ್ನಲ್ಲಿ ಈಗಾಗಲೇ ಚಿದ್ರಿ ಮತ್ತು ನೌಬಾದ್ ಗ್ರಾಮಗಳ ಎರಡು ಬಡಾವಣೆಗಳಲ್ಲಿ ವಸತಿ ಯೋಜನೆಗಳು ಅನುಷ್ಠಾನಗೊಂಡಿವೆ. ಹೊಸದಾಗಿ ಗೋರನಳ್ಳಿ (ಬಿ) ಗ್ರಾಮದಲ್ಲಿ ವಸತಿ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸುವ ಹೊಣೆಯನ್ನು ನಗರಾಭಿವೃದ್ಧಿ ಕೋಶಕ್ಕೆ ವಹಿಸಲಾಗಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದರು.</p>.<p class="Subhead"><strong>ಶಾಸಕರ ಅಸಮಾಧಾನ:</strong> ಬೀದರ್ ನಗರದಲ್ಲಿ ಒಳಚರಂಡಿ ಕಾಮಗಾರಿ ಸರಿಯಾಗಿಲ್ಲ. ಸಮರ್ಪಕ ನಿರ್ವಹಣೆಯೂ ಆಗುತ್ತಿಲ್ಲ. ಉದ್ಯಾನಗಳು ಅತಿಕ್ರಮಣವಾಗಿವೆ. ಒಳ ಚರಂಡಿ ಕಾಮಗಾರಿಗಾಗಿ ಅಗೆದ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಲ್ಲ ಎಂದು ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್ ಹಾಗೂ ಅರವಿಂದಕುಮಾರ ಅರಳಿ ಅಸಮಾಧಾನ ವ್ಯಕ್ತಪಡಿಸಿದರು.</p>.<p class="Subhead">ಈ ವೇಳೆ ಮಾತನಾಡಿದ ಸಚಿವರು, ‘ನಗರದಲ್ಲಿನ ಯುಜಿಡಿ ಮತ್ತು ಉದ್ಯಾನಗಳ ನಿರ್ವಹಣೆ ಸಮರ್ಪಕವಾಗಿ ನಡೆಯಲು ಕ್ರಮ ವಹಿಸಬೇಕು. ನಗರೋತ್ಥಾನ ಹಂತ 3ರಲ್ಲಿನ ನೂನ್ಯತೆಗಳನ್ನು ಸರಿಪಡಿಸಬೇಕು. ಕೆಯುಐಡಿಎಫ್ಸಿನ ಎಂಜಿನಿಯರ್ ವಾರದಲ್ಲಿ ಮೂರು ದಿನಗಳ ಕಾಲ ಬೀದರ್ನಲ್ಲಿದ್ದು ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಶಾಸಕ ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>