ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಗಣಿ ಮತ್ತು ಭೂವಿಜ್ಞಾನಗಳ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸಮನ್ವಯದಿಂದ ಗಡಿ ಭಾಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕು. ಒಂದೇ ಪರವಾನಗಿ ಬಳಸಿ ಹಲವು ಟ್ರಿಪ್ ಸಾಗಾಟ, ನಿಯಮ ಮೀರಿ ಮರಳು ಸಾಗಾಣಿಕೆ ಮಾಡುವವರನ್ನು ಗುರುತಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.