<p><strong>ಬೀದರ್</strong>: ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತ ಕಾರಣ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಇಲ್ಲಿಯ ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ದೇವರಿಗೆ ಆರತಿ ಬೆಳಗಿ, ಹೂವು, ಕಾಯಿ, ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ’ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಹೇಳಿದರು.</p>.<p>‘ಬೀದರ್ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. ಖೂಬಾ ಅವರಿಂದ ಜಿಲ್ಲೆಗೆ ಅನೇಕ ಹೊಸ ಯೋಜನೆಗಳು ಬರಲಿವೆ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ, ವೀರೇಶ ಸ್ವಾಮಿ, ಪ್ರಮುಖರಾದ ಅಂಬರೀಷ ಬಟನಾಪುರ, ಸಂತೋಷ ಬಿರಾದಾರ, ಶಿವು ಸುಲ್ತಾನಪುರ, ಸಂಗಮೇಶ ಸ್ವಾಮಿ, ಬಸವರಾಜ ಯರನಳ್ಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತ ಕಾರಣ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಇಲ್ಲಿಯ ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ದೇವರಿಗೆ ಆರತಿ ಬೆಳಗಿ, ಹೂವು, ಕಾಯಿ, ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ’ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಹೇಳಿದರು.</p>.<p>‘ಬೀದರ್ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. ಖೂಬಾ ಅವರಿಂದ ಜಿಲ್ಲೆಗೆ ಅನೇಕ ಹೊಸ ಯೋಜನೆಗಳು ಬರಲಿವೆ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ, ವೀರೇಶ ಸ್ವಾಮಿ, ಪ್ರಮುಖರಾದ ಅಂಬರೀಷ ಬಟನಾಪುರ, ಸಂತೋಷ ಬಿರಾದಾರ, ಶಿವು ಸುಲ್ತಾನಪುರ, ಸಂಗಮೇಶ ಸ್ವಾಮಿ, ಬಸವರಾಜ ಯರನಳ್ಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>