ಬೀದರ್: ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೆರೆ, ಬಾವಿಗಳು ಭರ್ತಿಯಾಗಿವೆ. ರಸ್ತೆಗಳು ಹಾಳಾಗಿವೆ. ಅಲ್ಲಲ್ಲಿ ಚರಂಡಿಗಳು ತುಂಬಿಕೊಂಡಿವೆ. ಪಿಡಿಒಗಳು ಗಮನ ಹರಿಸುತ್ತಿಲ್ಲ ಎಂದು ದೂರು ಪೆಟ್ಟಿಗೆಗೆ ದೂರುಗಳು ಬರುತ್ತಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಪಿಡಿಒಗಳಿಗೆ ಸೂಚಿಸಿದ್ದಾರೆ.