<p>ಹುಮನಾಬಾದ್: ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕುಣಿ ಗ್ರಾಮದಲ್ಲಿ ಕೃಷಿ ಹೊಂಡ ನಿರ್ಮಾಣದಲ್ಲಿ ಅಕ್ರಮ ನಡೆದಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗುರುವಾರ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ಗಣಪತಿ ಅಷ್ಟೋರೆ ಮಾತನಾಡಿ,‘ಸಿಂಧನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕುಣಿ ಗ್ರಾಮದ ಸರ್ವೇ ನಂಬರ್ 33 ಜಮೀನಿನಲ್ಲಿ 3 ಕೃಷಿ ಹೊಂಡಗಳು ನಿರ್ಮಿಸಲಾಗಿದೆ ಎಂದು ಹಣ ಲಪಟಾಯಿಸಿದ್ದಾರೆ. ಆದರೆ ಈ ಹೊಲದಲ್ಲಿ ಯಾವುದೇ ಕೃಷಿ ಹೊಂಡಗಳು ಇಲ್ಲ. ಈ ಬಗ್ಗೆ ಜಮೀನಿನ ಮಾಲೀಕರಿಗೂ ಸಹ ಮಾಹಿತಿ ಇಲ್ಲದೆ ಅಧಿಕಾರಿಗಳು ಅಕ್ರಮ ಮಾಡಿದ್ದಾರೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನಿನ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸುಶೀಲಕುಮಾರ್ ಭೋಲಾ, ಸಿದ್ದಾರ್ಥ ಜಾನವೀರ್, ಬಸವರಾಜ ಸಿಂಧೆ, ವಿಶಾಲ, ಅನಂತ ಮಾಳಗೆ, ವಿಜಯಕುಮಾರ್, ವಿಠಲ್, ಗೌತಮ್ ಜಾವೀರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕುಣಿ ಗ್ರಾಮದಲ್ಲಿ ಕೃಷಿ ಹೊಂಡ ನಿರ್ಮಾಣದಲ್ಲಿ ಅಕ್ರಮ ನಡೆದಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗುರುವಾರ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ಗಣಪತಿ ಅಷ್ಟೋರೆ ಮಾತನಾಡಿ,‘ಸಿಂಧನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕುಣಿ ಗ್ರಾಮದ ಸರ್ವೇ ನಂಬರ್ 33 ಜಮೀನಿನಲ್ಲಿ 3 ಕೃಷಿ ಹೊಂಡಗಳು ನಿರ್ಮಿಸಲಾಗಿದೆ ಎಂದು ಹಣ ಲಪಟಾಯಿಸಿದ್ದಾರೆ. ಆದರೆ ಈ ಹೊಲದಲ್ಲಿ ಯಾವುದೇ ಕೃಷಿ ಹೊಂಡಗಳು ಇಲ್ಲ. ಈ ಬಗ್ಗೆ ಜಮೀನಿನ ಮಾಲೀಕರಿಗೂ ಸಹ ಮಾಹಿತಿ ಇಲ್ಲದೆ ಅಧಿಕಾರಿಗಳು ಅಕ್ರಮ ಮಾಡಿದ್ದಾರೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನಿನ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸುಶೀಲಕುಮಾರ್ ಭೋಲಾ, ಸಿದ್ದಾರ್ಥ ಜಾನವೀರ್, ಬಸವರಾಜ ಸಿಂಧೆ, ವಿಶಾಲ, ಅನಂತ ಮಾಳಗೆ, ವಿಜಯಕುಮಾರ್, ವಿಠಲ್, ಗೌತಮ್ ಜಾವೀರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>