ತಾಲ್ಲೂಕಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವ್ಯಾಪಕ ಮಳೆಯಾಗಿ ರೈತರು ಬೆಳೆದ ಎಲ್ಲ ಬೆಳೆಗಳು ನೀರು ಪಾಲಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆ, ಸೇತುವೆಗಳು ಕೊಚ್ಚಿ ಹೋಗಿವೆ. ಮನೆಗಳು ಕುಸಿದು ಬಡ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರೈತರು ಬೆಳೆದ ಹೆಸರು, ಉದ್ದು, ತೊಗರಿ ಸೇರಿ ಬಹುತೇಕ ಫಸಲು ಕೈಕೊಟ್ಟಿದೆ ಎಂದರು.