<p><strong>ಔರಾದ್</strong>: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಯಾದ ಕೆರೆ ಹಾಗೂ ಸೇತುವೆ ದುರಸ್ತಿ ಕಾಮಗಾರಿಗೆ ಶಾಸಕ ಪ್ರಭು ಚವಾಣ್ ಭಾನುವಾರ ಚಾಲನೆ ನೀಡಿದರು.</p>.<p>‘ಭಾರಿ ಮಳೆಯಿಂದ ಯನಗುಂದಾ ಸೇತುವೆ ಕುಸಿದು ಈ ಭಾಗದ ಸಂಪರ್ಕ ಕಡಿತಗೊಂಡು ಜನ ತೀವ್ರ ತೊಂದರೆ ಎದುರಿಸುತ್ತಿದ್ದರು. ಬೋಂತಿ ಕೆರೆ ಒಡೆದು ಹೊಲಗಳಿಗೆ ನೀರು ನುಗ್ಗಿ ರೈತರು ಹಾನಿ ಅನುಭವಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ₹ 3 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕರು ತಿಳಿಸಿದರು.</p>.<p>‘ಸೇತುವೆ ಹಾಗೂ ಕೆರೆ ಕಾಮಗಾರಿ ಸೂಕ್ಷ್ಮವಾಗಿರುವುದರಿಂದ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಕಳಪೆ ಆದರೆ ಜನರೇ ಕಾಮಗಾರಿ ತಡೆ ಹಿಡಿಯಬೇಕು’ ಎಂದು ಹೇಳಿದರು.</p>.<p>ರಾಮಸಿಂಗ್ ನಾಯಕ್ ತಾಂಡಾ ಬಳಿಯ ₹ 1.5 ಕೋಟಿ ಕೆರೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಪ್ರತೀಕ ಚವಾಣ್, ಶಿವಕುಮಾರ ಮಜಗೆ, ನಾಗನಾಥ ಲಕ್ಕಾ, ರಮೇಶ ಗೌಡ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಯಾದ ಕೆರೆ ಹಾಗೂ ಸೇತುವೆ ದುರಸ್ತಿ ಕಾಮಗಾರಿಗೆ ಶಾಸಕ ಪ್ರಭು ಚವಾಣ್ ಭಾನುವಾರ ಚಾಲನೆ ನೀಡಿದರು.</p>.<p>‘ಭಾರಿ ಮಳೆಯಿಂದ ಯನಗುಂದಾ ಸೇತುವೆ ಕುಸಿದು ಈ ಭಾಗದ ಸಂಪರ್ಕ ಕಡಿತಗೊಂಡು ಜನ ತೀವ್ರ ತೊಂದರೆ ಎದುರಿಸುತ್ತಿದ್ದರು. ಬೋಂತಿ ಕೆರೆ ಒಡೆದು ಹೊಲಗಳಿಗೆ ನೀರು ನುಗ್ಗಿ ರೈತರು ಹಾನಿ ಅನುಭವಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ₹ 3 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕರು ತಿಳಿಸಿದರು.</p>.<p>‘ಸೇತುವೆ ಹಾಗೂ ಕೆರೆ ಕಾಮಗಾರಿ ಸೂಕ್ಷ್ಮವಾಗಿರುವುದರಿಂದ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಕಳಪೆ ಆದರೆ ಜನರೇ ಕಾಮಗಾರಿ ತಡೆ ಹಿಡಿಯಬೇಕು’ ಎಂದು ಹೇಳಿದರು.</p>.<p>ರಾಮಸಿಂಗ್ ನಾಯಕ್ ತಾಂಡಾ ಬಳಿಯ ₹ 1.5 ಕೋಟಿ ಕೆರೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಪ್ರತೀಕ ಚವಾಣ್, ಶಿವಕುಮಾರ ಮಜಗೆ, ನಾಗನಾಥ ಲಕ್ಕಾ, ರಮೇಶ ಗೌಡ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>