<p><strong>ಬೀದರ್: </strong>ಶಾಸಕ ರಹೀಂ ಖಾನ್ ಮಂಗಳವಾರ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಗ್ರಾಮಸ್ಥರ ಅಹವಾಲು ಆಲಿಸಿದರು.</p>.<p>ಬೀದರ್ ತಾಲ್ಲೂಕಿನ ಜಾಂಪಡ, ಕಪಲಾಪುರ, ಅಮದಲ್ಪಾಡ್, ಮಾಳೆಗಾಂವ, ಮಿರ್ಜಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಮಾಳೆಗಾಂವ ಮತ್ತು ಜಾಂಪಡದಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದರು.</p>.<p>ಮಾಳೆಗಾಂವದ ರಸಗೊಬ್ಬರ ವಿತರಣಾ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ, ಅಲ್ಲಿ ರಸಗೊಬ್ಬರ ಲಭ್ಯತೆ ಬಗ್ಗೆ ಮಾಹಿತಿ ಪಡೆದರು. ಇದೆ ವೇಳೆ ರೈತರ ಅಹವಾಲು ಆಲಿಸಿದರು. ಮಾಳೆಗಾಂವದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಶಾಸಕರಿಗೆ ದೂರಿದರು.</p>.<p>ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಗಮನ ಹರಿಸುವಂತೆ ಶಾಸಕರು ಪಿಡಿಒಗೆ ಸೂಚನೆ ನೀಡಿದರು.</p>.<p>‘ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟವರೊಂದಿಗೆ ಮಾತನಾಡಿ ನಿರಂತರ ವಿದ್ಯುತ್ ಪೂರೈಕೆ ಮಾಡಲು ಜೆಸ್ಕಾಂಗೆ ನಿರ್ದೇಶನ ನೀಡಬೇಕು’ ಎಂದು ಮಿರ್ಜಾಪುರ ಮತ್ತು ಜಾಂಪಡ ಗ್ರಾಮಸ್ಥರು ಮನವಿ ಮಾಡಿದರು.</p>.<p>ಕಪಲಾಪುರ ಮತ್ತು ಮಿರ್ಜಾಪುರ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಶಾಸಕ ರಹೀಂ ಖಾನ್ ಮಂಗಳವಾರ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಗ್ರಾಮಸ್ಥರ ಅಹವಾಲು ಆಲಿಸಿದರು.</p>.<p>ಬೀದರ್ ತಾಲ್ಲೂಕಿನ ಜಾಂಪಡ, ಕಪಲಾಪುರ, ಅಮದಲ್ಪಾಡ್, ಮಾಳೆಗಾಂವ, ಮಿರ್ಜಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಮಾಳೆಗಾಂವ ಮತ್ತು ಜಾಂಪಡದಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದರು.</p>.<p>ಮಾಳೆಗಾಂವದ ರಸಗೊಬ್ಬರ ವಿತರಣಾ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ, ಅಲ್ಲಿ ರಸಗೊಬ್ಬರ ಲಭ್ಯತೆ ಬಗ್ಗೆ ಮಾಹಿತಿ ಪಡೆದರು. ಇದೆ ವೇಳೆ ರೈತರ ಅಹವಾಲು ಆಲಿಸಿದರು. ಮಾಳೆಗಾಂವದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಶಾಸಕರಿಗೆ ದೂರಿದರು.</p>.<p>ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಗಮನ ಹರಿಸುವಂತೆ ಶಾಸಕರು ಪಿಡಿಒಗೆ ಸೂಚನೆ ನೀಡಿದರು.</p>.<p>‘ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟವರೊಂದಿಗೆ ಮಾತನಾಡಿ ನಿರಂತರ ವಿದ್ಯುತ್ ಪೂರೈಕೆ ಮಾಡಲು ಜೆಸ್ಕಾಂಗೆ ನಿರ್ದೇಶನ ನೀಡಬೇಕು’ ಎಂದು ಮಿರ್ಜಾಪುರ ಮತ್ತು ಜಾಂಪಡ ಗ್ರಾಮಸ್ಥರು ಮನವಿ ಮಾಡಿದರು.</p>.<p>ಕಪಲಾಪುರ ಮತ್ತು ಮಿರ್ಜಾಪುರ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>