‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಇತಿಹಾಸದಲ್ಲಿಯೇ ಹಿಂದೆಂದು ಕಾಣದ ಪ್ರಗತಿಯನ್ನು ತನ್ನ ಆಡಳಿತಾವಧಿಯಲ್ಲಿ ಮಾಡಿದೆ. ಬಡವ–ಶ್ರೀಮಂತ, ದೀನ–ದಲಿತ ಎನ್ನದೆ ಎಲ್ಲರನ್ನು ಸಮಾಜದ ಮುಖ್ಯವಾಹಿನಿಗೆ ತರವ ಕಾರ್ಯವನ್ನು ಪ್ರಧಾನಿ ಮೋದಿ ಅವರು ಮಾಡಿದ್ದಾರೆ. ಹೀಗಾಗಿ ವಿದ್ಯಾವಂತ, ಪ್ರಜ್ಞಾವಂತ ಮತದಾರರು ದೇಶದ ಹಿಂದಿನ ಇಂದಿನ ಪರಿಸ್ಥಿತಿ ಕಂಡು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರಿಗೆ ಮತ ಚಲಾಯಿಸಬೇಕು’ ಎಂದು ಮನವಿ ಮಾಡಿದರು.