‘ನಮ್ಮಲ್ಲಿ ಶೀಘ್ರಲಿಪಿಕಾರರು ಇಲ್ಲ. ಹೀಗಾಗಿ ಸಮಸ್ಯೆಯಾಗಿದೆ’ ಎಂದು ದುಬೆ ಅವರು ಸಮಜಾಯಿಸಿ ನೀಡಲು ಯತ್ನಿಸಿದಾಗ ಗರಂ ಆದ ಸಚಿವರು ‘ಬಿಸ್ಕತ್, ಗೋಡಂಬಿ ತಿಂದು ನಿಮ್ಮ ಕಥೆ ಕೇಳಲು ಕೆಡಿಪಿ ಸಭೆಗೆ ಬಂದಿಲ್ಲ. ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಸಭೆಯ ಗಾಂಭೀರ್ಯ ಕಾಯ್ದುಕೊಳ್ಳಬೇಕು’ ಎಂದು ತರಾಟೆಗೆ ತೆಗೆದುಕೊಂಡರು.