ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣಕ್ಕೆ ಈವರೆಗೆ ನಾಲ್ಕು ಜಾಗಗಳನ್ನು ಗುರುತಿಸಲಾಗಿದೆ. ಸಮತಟ್ಟಾಗಿಲ್ಲ, ನೀರಿನ ಮೂಲಗಳಿಲ್ಲ, ಜನರಿಗೆ ಹೋಗಿ ಬರಲು ತೊಂದರೆಯಾಗಲಿದೆ ಎನ್ನುವ ಕಾರಣಕ್ಕೆ ಚಿಕ್ಕಪೇಟ ಹಾಗೂ ಮಾಮನಕೇರಿ ಗುಡ್ಡದಲ್ಲಿ ಗುರುತಿಸಿದ್ದ ಜಾಗಗಳನ್ನು ಕೈಬಿಡಲಾಗಿತ್ತು. ನಂತರ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ಜನರ ಅಭಿಪ್ರಾಯ ಪಡೆದು ಸರ್ವ ಸಮ್ಮತಿಯಿಂದ ಸದ್ಯದ ಜಿಲ್ಲಾಧಿಕಾರಿ ಕಚೇರಿ ಜಾಗದಲ್ಲೇ ನಿರ್ಮಿಸಲು ನಿರ್ಣಯಿಸಲಾಗಿತ್ತು ಎಂದು ಹೇಳಿದ್ದಾರೆ.