<p><strong>ಬಸವಕಲ್ಯಾಣ:</strong> ‘ಗುಳೆ ಹೋಗುವುದು ಬ್ಯಾಡ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಅದರ ಪ್ರಯೋಜನ ಪಡೆಯಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫಿ ಹೇಳಿದರು.</p>.<p>ತಾಲ್ಲೂಕಿನ ಹೋಬಳಿ ಕೇಂದ್ರ ರಾಜೇಶ್ವರದ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಮತದಾನ ಕುರಿತಾದ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>‘ಖಾತ್ರಿ ಯೋಜನೆಯ ದಿನಗೂಲಿ ಹಣ ₹ 316 ರಿಂದ ₹ 349ಕ್ಕೆ ಹೆಚ್ಚಳವಾಗಿದೆ. ಇದಲ್ಲದೆ ಗ್ರಾಮಗಳಲ್ಲಿ ಈ ಯೋಜನೆಯಲ್ಲಿ ಪ್ರತಿಯೊಬ್ಬರಿಗೆ 100 ದಿನಗಳವರೆಗೆ ವಿವಿಧ ಕೆಲಸ ಒದಗಿಸಲಾಗುತ್ತದೆ. ಈ ಸಂಬಂಧ ದೂರುಗಳಿದ್ದರೆ ಸಹಾಯವಾಣಿ 82775 06000 ಸಂಖ್ಯೆಗೆ ಕರೆ ಮಾಡಬಹುದು’ ಎಂದರು.</p>.<p>‘ಲೋಕಸಭೆ ಚುನಾವಣೆಯಲ್ಲಿ ಆಸೆ ಆಮೀಷಗಳಿಗೆ ಬಲಿಯಾಗದೆ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶವಾಗಿದ್ದು, ಉತ್ತಮ ಆಡಳಿತ ನೀಡುವವರನ್ನು ಆಯ್ಕೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ’ ಎಂದರು.</p>.<p>ನರೇಗಾ ಸಹಾಯಕ ನಿರ್ದೇಶಕ ಸಂತೋಷಕುಮಾರ ಚವಾಣ ಮಾತನಾಡಿ, ‘ಗ್ರಾಮ ಪಂಚಾಯಿತಿಯವರು ಬೇಸಿಗೆ ಮುಗಿಯುವವರೆಗೂ ಕೂಲಿಕಾರ್ಮಿಕರಿಗೆ ನಿರಂತರವಾಗಿ ಕೆಲಸ ಕೊಡಬೇಕು. ಈ ಬಗ್ಗೆ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪಿಡಿಒ ಪದ್ಮಪ್ಪ ಗಾಣಿಗೇರ, ಪ್ರಮುಖರಾದ ರಾಕೇಶ ಐನೊಳ್ಳಿ, ವೀರಾರೆಡ್ಡಿ, ಅಮರನಾಥ ಪಾಟೀಲ, ಮಾಣಿಕ ಮೋರೆ, ಶ್ರೀಕಾಂತ ಪಾಟೀಲ, ಜಲೀಲಸಾಬ್, ಅವಿನಾಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ಗುಳೆ ಹೋಗುವುದು ಬ್ಯಾಡ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಅದರ ಪ್ರಯೋಜನ ಪಡೆಯಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫಿ ಹೇಳಿದರು.</p>.<p>ತಾಲ್ಲೂಕಿನ ಹೋಬಳಿ ಕೇಂದ್ರ ರಾಜೇಶ್ವರದ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಮತದಾನ ಕುರಿತಾದ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>‘ಖಾತ್ರಿ ಯೋಜನೆಯ ದಿನಗೂಲಿ ಹಣ ₹ 316 ರಿಂದ ₹ 349ಕ್ಕೆ ಹೆಚ್ಚಳವಾಗಿದೆ. ಇದಲ್ಲದೆ ಗ್ರಾಮಗಳಲ್ಲಿ ಈ ಯೋಜನೆಯಲ್ಲಿ ಪ್ರತಿಯೊಬ್ಬರಿಗೆ 100 ದಿನಗಳವರೆಗೆ ವಿವಿಧ ಕೆಲಸ ಒದಗಿಸಲಾಗುತ್ತದೆ. ಈ ಸಂಬಂಧ ದೂರುಗಳಿದ್ದರೆ ಸಹಾಯವಾಣಿ 82775 06000 ಸಂಖ್ಯೆಗೆ ಕರೆ ಮಾಡಬಹುದು’ ಎಂದರು.</p>.<p>‘ಲೋಕಸಭೆ ಚುನಾವಣೆಯಲ್ಲಿ ಆಸೆ ಆಮೀಷಗಳಿಗೆ ಬಲಿಯಾಗದೆ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶವಾಗಿದ್ದು, ಉತ್ತಮ ಆಡಳಿತ ನೀಡುವವರನ್ನು ಆಯ್ಕೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ’ ಎಂದರು.</p>.<p>ನರೇಗಾ ಸಹಾಯಕ ನಿರ್ದೇಶಕ ಸಂತೋಷಕುಮಾರ ಚವಾಣ ಮಾತನಾಡಿ, ‘ಗ್ರಾಮ ಪಂಚಾಯಿತಿಯವರು ಬೇಸಿಗೆ ಮುಗಿಯುವವರೆಗೂ ಕೂಲಿಕಾರ್ಮಿಕರಿಗೆ ನಿರಂತರವಾಗಿ ಕೆಲಸ ಕೊಡಬೇಕು. ಈ ಬಗ್ಗೆ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪಿಡಿಒ ಪದ್ಮಪ್ಪ ಗಾಣಿಗೇರ, ಪ್ರಮುಖರಾದ ರಾಕೇಶ ಐನೊಳ್ಳಿ, ವೀರಾರೆಡ್ಡಿ, ಅಮರನಾಥ ಪಾಟೀಲ, ಮಾಣಿಕ ಮೋರೆ, ಶ್ರೀಕಾಂತ ಪಾಟೀಲ, ಜಲೀಲಸಾಬ್, ಅವಿನಾಶ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>