ಮೊಬೈಲ್ ಅಂಗಡಿಗೆ ಬೆಂಕಿ: ಅಪಾರ ಹಾನಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಇಲ್ಲಿಯ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿ ಇರುವ ಎಕ್ಸಿಸ್ ಬ್ಯಾಂಕ್ ಎದುರಿನ ಕಲ್ಪನಾ ಎಸ್ಟೇಟ್ನಲ್ಲಿಯ ‘ಶ್ರೀ ಸಾಯಿ ಗುರು ಸೆಲ್’ ಮೊಬೈಲ್ ಅಂಗಡಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ಭಾನುವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಅವಘಡದಿಂದ ಸುಮಾರು ₹ 21 ಲಕ್ಷ ನಷ್ಟ ಉಂಟಾಗಿದೆ ಎಂದು ಅಂಗಡಿ ಮಾಲೀಕ ಸಿದ್ರಾಮ ನಾಗಪ್ಪ ಬಿರಾದಾರ ಗಾಂಧಿಗಂಜ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯಲ್ಲಿ ವಿವಿಧ ಕಂಪನಿಗಳ ಮೊಬೈಲ್ಗಳು, ಸಿಸಿ ಟಿವಿ ಕ್ಯಾಮೆರಾ, ಮಾನಿಟರ್, ಝೆರಾಕ್ಸ್ ಮಷೀನ್, ಇನ್ವರ್ಟರ್, ಕಂಪ್ಯೂಟರ್, ಫರ್ನಿಚರ್ ಮೊದಲಾದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.