<p><strong>ಬೀದರ್:</strong> ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಜನವರಿ 31ರಂದು ಸಂಭವಿಸಿದ ಸ್ಫೋಟದಲ್ಲಿ ‘ಸ್ಲೀಪರ್ ಸೆಲ್’ ಹಾಗೂ ಆತಂಕವಾದಿಗಳ ಕೈವಾಡದ ಅನುಮಾನವಿದ್ದು, ಈ ಘಟನೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಮಾಡಿಸಬೇಕು’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಆಗ್ರಹಿಸಿದರು.</p><p>ಬೀದರ್ ಜಿಲ್ಲೆಯಲ್ಲಿ ಅನೇಕ ಪೇಟಿಂಗ್ ಮಳಿಗೆಗಳಿವೆ. ಅಲ್ಲಿ ಒಂದು ಸಲವೂ ಸ್ಫೋಟ ಆಗಿಲ್ಲ. ವರ್ಷದ ಹಿಂದೆ ಕೂಡ ಮೋಳಕೇರಾ ಗ್ರಾಮದಲ್ಲಿ ಸ್ಫೋಟ ಸಂಭವಿಸಿತ್ತು. ಒಟ್ಟು ಐದು ಸಲ ಈ ರೀತಿ ಸ್ಫೋಟಗಳು ಆಗಿವೆ. ಹಿಂದೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದರು. ಸ್ಫೋಟದ ತೀವ್ರತೆ ಹೆಚ್ಚಿರುವುದರಿಂದಲೇ ಈ ಸಲ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಅನಿಸುತ್ತಿದೆ. ಆದಕಾರಣ ಎನ್ಐಎಯಿಂದ ತನಿಖೆ ಮಾಡಿಸಿದರೆ ಸತ್ಯ ಹೊರಬರುತ್ತದೆ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ಅಭಿಪ್ರಾಯ ಪಟ್ಟರು.</p><p>ಏನೂ ಮಾಡಿದರೂ ನಡೆಯುತ್ತೆ ಎಂಬ ತುಷ್ಟೀಕರಣದ ಮನಃಸ್ಥಿತಿ ಇದರ ಹಿಂದೆ ಇದ್ದಂತಿದೆ. ನೇರವಾಗಿ ಇದರಲ್ಲಿ ಆತಂಕವಾದಿಗಳು ಭಾಗಿಯಾಗಿರುವ ಶಂಕೆ ಇದೆ. ಮೋಳಕೇರಾ ಗ್ರಾಮದ ವ್ಯಕ್ತಿಯೊಬ್ಬ ನಾನು ಬಾಂಗ್ಲಾದೇಶ, ಪಾಕಿಸ್ತಾನದವನು ಎಂದು ಹೇಳಿಕೊಂಡಿದ್ದಾನೆ. ಇದರ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಜನವರಿ 31ರಂದು ಸಂಭವಿಸಿದ ಸ್ಫೋಟದಲ್ಲಿ ‘ಸ್ಲೀಪರ್ ಸೆಲ್’ ಹಾಗೂ ಆತಂಕವಾದಿಗಳ ಕೈವಾಡದ ಅನುಮಾನವಿದ್ದು, ಈ ಘಟನೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಮಾಡಿಸಬೇಕು’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಆಗ್ರಹಿಸಿದರು.</p><p>ಬೀದರ್ ಜಿಲ್ಲೆಯಲ್ಲಿ ಅನೇಕ ಪೇಟಿಂಗ್ ಮಳಿಗೆಗಳಿವೆ. ಅಲ್ಲಿ ಒಂದು ಸಲವೂ ಸ್ಫೋಟ ಆಗಿಲ್ಲ. ವರ್ಷದ ಹಿಂದೆ ಕೂಡ ಮೋಳಕೇರಾ ಗ್ರಾಮದಲ್ಲಿ ಸ್ಫೋಟ ಸಂಭವಿಸಿತ್ತು. ಒಟ್ಟು ಐದು ಸಲ ಈ ರೀತಿ ಸ್ಫೋಟಗಳು ಆಗಿವೆ. ಹಿಂದೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದರು. ಸ್ಫೋಟದ ತೀವ್ರತೆ ಹೆಚ್ಚಿರುವುದರಿಂದಲೇ ಈ ಸಲ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಅನಿಸುತ್ತಿದೆ. ಆದಕಾರಣ ಎನ್ಐಎಯಿಂದ ತನಿಖೆ ಮಾಡಿಸಿದರೆ ಸತ್ಯ ಹೊರಬರುತ್ತದೆ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ಅಭಿಪ್ರಾಯ ಪಟ್ಟರು.</p><p>ಏನೂ ಮಾಡಿದರೂ ನಡೆಯುತ್ತೆ ಎಂಬ ತುಷ್ಟೀಕರಣದ ಮನಃಸ್ಥಿತಿ ಇದರ ಹಿಂದೆ ಇದ್ದಂತಿದೆ. ನೇರವಾಗಿ ಇದರಲ್ಲಿ ಆತಂಕವಾದಿಗಳು ಭಾಗಿಯಾಗಿರುವ ಶಂಕೆ ಇದೆ. ಮೋಳಕೇರಾ ಗ್ರಾಮದ ವ್ಯಕ್ತಿಯೊಬ್ಬ ನಾನು ಬಾಂಗ್ಲಾದೇಶ, ಪಾಕಿಸ್ತಾನದವನು ಎಂದು ಹೇಳಿಕೊಂಡಿದ್ದಾನೆ. ಇದರ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>