<p><strong>ಹುಲಸೂರ</strong>: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಕಳೆದ ಏಳು ದಿನಗಳಿಂದ ಗುಣಮಟ್ಟದ ಶಿಕ್ಷಣ, ಉಪಹಾರ ಇಲ್ಲದೆ ವಾರ್ಡನ್ ಬೇಜವಾಬ್ದಾರಿಯಿಂದ ಜೀವಭಯದಲ್ಲಿ ರಾತ್ರಿ ಕಳೆಯುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ದಸರಾ ಹಬ್ಬದ ರಜೆಯ ನಂತರ ಅ.21 ರಂದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಿಡಲು ಪ್ರಾಂಶುಪಾಲರು ಆದೇಶ ನೀಡಿದ್ದರು. 6 ರಿಂದ 10ನೇ ತರಗತಿ ವರೆಗೆ ಒಟ್ಟು 230ಕ್ಕಿಂತ ಹೆಚ್ಚು ಮಕ್ಕಳು ಪ್ರವೇಶ ಪಡೆದಿದ್ದು ಅದರಲ್ಲಿ 40 ಜನ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ತಂದು ಬಿಟ್ಟಿದ್ದರು.</p>.<p>ಆದರೆ ವಾರ ಕಳೆದರೂ ಪ್ರಾಂಶುಪಾಲ ಹಾಗೂ ವಾರ್ಡನ್ ವಸತಿ ನಿಲಯದಲ್ಲಿ ವಾಸವಾಗದೆ ಮಕ್ಕಳ ಜವಾಬ್ದಾರಿಯನ್ನು ಕಾವಲುಗಾರರಿಗೆ ವಹಿಸಿ ಹೋಗಿದ್ದಾರೆ. ಇದರಿಂದ ಬೇಸರಗೊಂಡ ಪೋಷಕರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.</p>.<p>ಈ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ದಿಲೀಪ್ ಗೌತಮ ಅವರನ್ನು ಸಂಪರ್ಕಿಸಿದಾಗ, ‘ನಾನು ಈಗ ಸಭೆಯಲ್ಲಿರುವೆ ದೂರು ನೀಡಿದ ಪಾಲಕರ ದೂರವಾಣಿ ಸಂಖ್ಯೆ ಕೊಡಿ’ ಎಂದು ಪ್ರತಿಕ್ರಿಯಿಸಿದರು.</p>.<p>ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿಂಧು, ‘ನಾನು ಈಗ ಸ್ಥಳೀಯವಾಗಿಲ್ಲ. ಅಧಿಕಾರಿಗಳ ಆದೇಶವಿಲ್ಲದೆ ಶಾಲಾ ಆವರಣದಲ್ಲಿ ಪತ್ರಕರ್ತರು ಹೋಗುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ ಹಾಗೂ ಸಮಸ್ಯೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಕಳೆದ ಏಳು ದಿನಗಳಿಂದ ಗುಣಮಟ್ಟದ ಶಿಕ್ಷಣ, ಉಪಹಾರ ಇಲ್ಲದೆ ವಾರ್ಡನ್ ಬೇಜವಾಬ್ದಾರಿಯಿಂದ ಜೀವಭಯದಲ್ಲಿ ರಾತ್ರಿ ಕಳೆಯುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ದಸರಾ ಹಬ್ಬದ ರಜೆಯ ನಂತರ ಅ.21 ರಂದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಿಡಲು ಪ್ರಾಂಶುಪಾಲರು ಆದೇಶ ನೀಡಿದ್ದರು. 6 ರಿಂದ 10ನೇ ತರಗತಿ ವರೆಗೆ ಒಟ್ಟು 230ಕ್ಕಿಂತ ಹೆಚ್ಚು ಮಕ್ಕಳು ಪ್ರವೇಶ ಪಡೆದಿದ್ದು ಅದರಲ್ಲಿ 40 ಜನ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ತಂದು ಬಿಟ್ಟಿದ್ದರು.</p>.<p>ಆದರೆ ವಾರ ಕಳೆದರೂ ಪ್ರಾಂಶುಪಾಲ ಹಾಗೂ ವಾರ್ಡನ್ ವಸತಿ ನಿಲಯದಲ್ಲಿ ವಾಸವಾಗದೆ ಮಕ್ಕಳ ಜವಾಬ್ದಾರಿಯನ್ನು ಕಾವಲುಗಾರರಿಗೆ ವಹಿಸಿ ಹೋಗಿದ್ದಾರೆ. ಇದರಿಂದ ಬೇಸರಗೊಂಡ ಪೋಷಕರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.</p>.<p>ಈ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ದಿಲೀಪ್ ಗೌತಮ ಅವರನ್ನು ಸಂಪರ್ಕಿಸಿದಾಗ, ‘ನಾನು ಈಗ ಸಭೆಯಲ್ಲಿರುವೆ ದೂರು ನೀಡಿದ ಪಾಲಕರ ದೂರವಾಣಿ ಸಂಖ್ಯೆ ಕೊಡಿ’ ಎಂದು ಪ್ರತಿಕ್ರಿಯಿಸಿದರು.</p>.<p>ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿಂಧು, ‘ನಾನು ಈಗ ಸ್ಥಳೀಯವಾಗಿಲ್ಲ. ಅಧಿಕಾರಿಗಳ ಆದೇಶವಿಲ್ಲದೆ ಶಾಲಾ ಆವರಣದಲ್ಲಿ ಪತ್ರಕರ್ತರು ಹೋಗುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ ಹಾಗೂ ಸಮಸ್ಯೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>