ಹುಮನಾಬಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ನಿಂಬೂರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಹಾಗೂ ವಾಂತಿ ಭೇದಿ ಕಾಣಿಸಿಕೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಶಾಲೆಯ ಮಕ್ಕಳು ಮಧ್ಯಾಹ್ನ ಶಾಲೆಯಲ್ಲಿ ತಯಾರಿಸಿದ ಅನ್ನ ಸಾಂಬಾರ್ ಸೇವನೆ ಮಾಡಿದ್ದರು. ನಂತರ ಸಂಜೆ 4 ಗಂಟೆ ಹೊತ್ತಿಗೆ ಕೆಲವು ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ–ಭೇದಿ ಕಾಣಿಸಿಕೊಂಡಿತು. ಮನೆಗೆ ತೆರಳಿದ್ದ ಇನ್ನೂ ಕೆಲವು ವಿದ್ಯಾರ್ಥಿಗಳಲ್ಲಿಯೂ ವಾಂತಿ–ಭೇದಿ ಕಾಣಿಸಿಕೊಂಡಿತ್ತು’ ಎಂದು ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾದೇವ ತಿಳಿಸಿದ್ದಾರೆ.