<p><span style="font-size:12px;"><strong>ಜನವಾಡ:</strong> ‘ಸುರಕ್ಷಿತ ಗರ್ಭಪಾತ ಒಳಗೊಂಡ ಲೈಂಗಿಕ ಸಂತಾನೋತ್ಪತ್ತಿ ಆರೋಗ್ಯ ಸೇವೆಯ ಮೂಲಕ ಅನಪೇಕ್ಷಿತ ಜನನಗಳನ್ನು ನಿಯಂತ್ರಿಸುವುದು ಹಾಗೂ ತಾಯಿಯ ಮರಣ ಪ್ರಮಾಣ ತಗ್ಗಿಸುವುದು ವಿಕಲ್ಪ ಯೋಜನೆಯ ಗುರಿಯಾಗಿದೆ’ ಎಂದು ಭಾರತೀಯ ಕುಟುಂಬ ಯೋಜನಾ ಸಂಘ(ಎಫ್ಪಿಎಐ)ದ ಸ್ಥಳೀಯ ಶಾಖೆಯ ಅಧ್ಯಕ್ಷ ಪೆಂಟಾರೆಡ್ಡಿ ಪಾಟೀಲ ತಿಳಿಸಿದರು.</span></p>.<p><span style="font-size:12px;">ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ವಿಕಲ್ಪ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</span></p>.<p><span style="font-size:12px;">‘ಸಂಘವು ದೇಶದ ಆಯ್ದ 8 ರಾಜ್ಯಗಳಲ್ಲಿ ವಿಕಲ್ಪ ಯೋಜನೆ ಅನುಷ್ಠಾನಗೊಳಿಸುತ್ತಿದೆ’ ಎಂದು ಹೇಳಿದರು.</span></p>.<p><span style="font-size:12px;">‘ವಿಕಲ್ಪವು ಸಮುದಾಯದ ಸಹಭಾಗಿತ್ವದಲ್ಲಿ ಲೈಂಗಿಕ ಪ್ರಜನನ ಆರೋಗ್ಯ ಸೇವೆ ಹಾಗೂ ಅದರ ಅರಿವಿನ ಮೂಲಕ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳ ಕೊರತೆ ನೀಗಿಸಲು ಸಹಕಾರಿಯಾಗಲಿದೆ’ ಎಂದು ಸಂಘದ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ತಿಳಿಸಿದರು.</span></p>.<p><span style="font-size:12px;">ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಉದ್ಘಾಟಿಸಿದರು. ಸಂಘದ ಕೇಂದ್ರ ಕಚೇರಿಯ ಮಾಜಿ ಉಪಾಧ್ಯಕ್ಷೆ ಪ್ರೊ. ಪೂರ್ಣಿಮಾ ಜಿ., ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ದೀಪಾ ಖಂಡ್ರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧವರಾವ್ ಪಾಟೀಲ, ಡಾ. ಸಿ.ಎಸ್. ಮಾಲಿಪಾಟೀಲ ಉಪಸ್ಥಿತರಿದ್ದರು.<br />ಕಾರ್ಯಕ್ರಮಕ್ಕೂ ಮುನ್ನ ಯೋಜನೆಯ ಜಾಗೃತಿ ಜಾಥಾ ನಡೆಯಿತು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:12px;"><strong>ಜನವಾಡ:</strong> ‘ಸುರಕ್ಷಿತ ಗರ್ಭಪಾತ ಒಳಗೊಂಡ ಲೈಂಗಿಕ ಸಂತಾನೋತ್ಪತ್ತಿ ಆರೋಗ್ಯ ಸೇವೆಯ ಮೂಲಕ ಅನಪೇಕ್ಷಿತ ಜನನಗಳನ್ನು ನಿಯಂತ್ರಿಸುವುದು ಹಾಗೂ ತಾಯಿಯ ಮರಣ ಪ್ರಮಾಣ ತಗ್ಗಿಸುವುದು ವಿಕಲ್ಪ ಯೋಜನೆಯ ಗುರಿಯಾಗಿದೆ’ ಎಂದು ಭಾರತೀಯ ಕುಟುಂಬ ಯೋಜನಾ ಸಂಘ(ಎಫ್ಪಿಎಐ)ದ ಸ್ಥಳೀಯ ಶಾಖೆಯ ಅಧ್ಯಕ್ಷ ಪೆಂಟಾರೆಡ್ಡಿ ಪಾಟೀಲ ತಿಳಿಸಿದರು.</span></p>.<p><span style="font-size:12px;">ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ವಿಕಲ್ಪ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</span></p>.<p><span style="font-size:12px;">‘ಸಂಘವು ದೇಶದ ಆಯ್ದ 8 ರಾಜ್ಯಗಳಲ್ಲಿ ವಿಕಲ್ಪ ಯೋಜನೆ ಅನುಷ್ಠಾನಗೊಳಿಸುತ್ತಿದೆ’ ಎಂದು ಹೇಳಿದರು.</span></p>.<p><span style="font-size:12px;">‘ವಿಕಲ್ಪವು ಸಮುದಾಯದ ಸಹಭಾಗಿತ್ವದಲ್ಲಿ ಲೈಂಗಿಕ ಪ್ರಜನನ ಆರೋಗ್ಯ ಸೇವೆ ಹಾಗೂ ಅದರ ಅರಿವಿನ ಮೂಲಕ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳ ಕೊರತೆ ನೀಗಿಸಲು ಸಹಕಾರಿಯಾಗಲಿದೆ’ ಎಂದು ಸಂಘದ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ತಿಳಿಸಿದರು.</span></p>.<p><span style="font-size:12px;">ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಉದ್ಘಾಟಿಸಿದರು. ಸಂಘದ ಕೇಂದ್ರ ಕಚೇರಿಯ ಮಾಜಿ ಉಪಾಧ್ಯಕ್ಷೆ ಪ್ರೊ. ಪೂರ್ಣಿಮಾ ಜಿ., ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ದೀಪಾ ಖಂಡ್ರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧವರಾವ್ ಪಾಟೀಲ, ಡಾ. ಸಿ.ಎಸ್. ಮಾಲಿಪಾಟೀಲ ಉಪಸ್ಥಿತರಿದ್ದರು.<br />ಕಾರ್ಯಕ್ರಮಕ್ಕೂ ಮುನ್ನ ಯೋಜನೆಯ ಜಾಗೃತಿ ಜಾಥಾ ನಡೆಯಿತು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>