ಉತ್ತಮ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಜನರು ಸೈಕಲ್ ಬಳಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗುತ್ತಿದೆ. ರೋಟರಿ ಪದಾಧಿಕಾರಿಗಳು, ಪ್ರಮುಖರು ನಗರದ ಜ್ಞಾನಸುಧಾ, ಗುರುನಾನಕ, ಜೀಜಾಮಾತಾ, ಸಮತಾ, ಅರುಣೋದಯ ಮೊದಲಾದ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಸ್ಪರ್ಧೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕೋರಲಾಗಿದೆ. ವಿದ್ಯಾರ್ಥಿಗಳು ಸೈಕಲ್ ಸ್ಪರ್ಧೆ ಬಗ್ಗೆ ಆಸಕ್ತಿ ವಹಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದ್ದಾರೆ.