‘ಮಸೀದಿಗಳಲ್ಲಿ ಬೆಳಿಗ್ಗೆ 5ಕ್ಕೆ ಆಝಾನ್ ಪ್ರಾರ್ಥನೆ ಶುರುವಾಗುತ್ತದೆ. ಮೈಕ್ ಅಳವಡಿಸಿ ಪ್ರಾರ್ಥನೆ ಸಲ್ಲಿಸುವುದರಿಂದ ವಿದ್ಯಾರ್ಥಿಗಳು, ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಕಿರಿಕಿರಿಯಾಗುತ್ತಿದೆ. ಸಾರ್ವಜನಿಕ ಸ್ಥಳದಲ್ಲಿ ಮೈಕ್ ಬಳಸಬೇಕೆಂದರೆ ಪೊಲೀಸರ ಅನುಮತಿ ಅಗತ್ಯ. ಆದರೆ, ಮಸೀದಿಗಳಿಗೆ ಈ ನಿಯಮ ಏಕೆ ಅನ್ವಯವಾಗುತ್ತಿಲ್ಲ’ ಎಂದು ಕಿಡಿಕಾರಿದರು.
‘ದತ್ತ ಪೀಠಕ್ಕೆ ಸಂಬಂಧಿಸಿದ ವಿವಾದವನ್ನು ರಾಜ್ಯ ಸರ್ಕಾರವೇ ಬಗೆಹರಿಸಿಕೊಳ್ಳಬೇಕು ಎಂದು 2018ರಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿ ದತ್ತ ಪೀಠವು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಮೌಲ್ವಿಗೆ ಪೂಜೆ ಮಾಡಲು ಅನುಮತಿ ಕೊಟ್ಟಿತು. ರಾಜ್ಯದ ಹೈಕೋರ್ಟ್ ಮೌಲ್ವಿ ನೇಮಕ ರದ್ದು ಮಾಡಿರುವುದು ಸ್ವಾಗತಾರ್ಹವಾಗಿದೆ’ ಎಂದರು.