ರವೀಂದ್ರ ಕಾಂಗ್ರೆಸ್ನಿಂದ ನಗರಸಭೆಗೆ ಆಯ್ಕೆಯಾಗಿದ್ದರು. ಆದರೆ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಬಿಜೆಪಿ ಪರ ಕೆಲಸ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.