ಬೀದರ್: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ನಗರದ ವಿವೇಕಾನಂದ ಕಾಲೊನಿಯ ಪಂಚಾಕ್ಷರ ನಿಲಯದ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ವಲಯ ಅರಣ್ಯಾಧಿಕಾರಿ ಶಿವಕುಮಾರ ರಾಠೋಡ ಪಾಲ್ಗೊಂಡಿದ್ದರು. ಸಂಘದ ಅಧ್ಯಕ್ಷ ಪ್ರೊ.ಎಸ್.ವಿ. ಕಲ್ಮಠ ಅಧ್ಯಕ್ಷತೆ ವಹಿಸಿದ್ದರು.
ಪೌರ ಕಾರ್ಮಿಕರಾದ ಶಿವರಾಜ್ ಹಾಗೂ ಜಗದೇವಿ ಅವರನ್ನು ಸನ್ಮಾನಿಸಲಾಯಿತು. ಪಂಚಾಕ್ಷರ ನಿಲಯ ಕೋವಿಡ್ ವಿಕ್ಟರಿ ಗಾರ್ಡನ್ನಲ್ಲಿ ಬೆಳೆಸಿದ ಸಸಿಗಳನ್ನು ಬಡಾವಣೆ ನಿವಾಸಿಗಳಿಗೆ ವಿತರಿಸಲಾಯಿತು.