<p><strong>ಬೀದರ್: </strong>ನಗರದ ಮೈಲೂರು ಶಾಸ್ತ್ರಿನಗರದ ಆರೋಗ್ಯ ಇಲಾಖೆಯ ನಿವೃತ್ತ ನೌಕರ ನಾರಾಯಣರಾವ್ ಮುಕಿಂದರಾವ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ನಗರದ ಅರ್ಕಟಗಲ್ಲಿಯ ಅಂಬ್ರೇಶ್ ಕೇಶವರಾವ್, ರಾಜಪೂತ್ ಕಾಲೊನಿಯ ಠಾಕೂರ್ ಸಚಿನ್ ಸಿಂಗ್ ಹಾಗೂ ಕುಂಬಾರವಾಡದ ವಿನೋದ ವೈಜಿನಾಥ ಬಂಧಿತ ಆರೋಪಿಗಳು.</p>.<p>ಫೆಬ್ರುವರಿ 12ರಂದು ಜಿಲ್ಲಾ ಆಸ್ಪತ್ರೆಯಿಂದ ಬೈಕ್ ಮೇಲೆ ಹೋಗಿದ್ದ ನಾರಾಯಣರಾವ್ ಮನೆಗೆ ತಲುಪದೆ ಕಾಣೆಯಾಗಿದ್ದರು. ಮರುದಿನ ಅವರ ಪತ್ನಿ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ನಾರಾಯಣರಾವ್ ಅವರನ್ನು ಕೊಲೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು.</p>.<p>‘ಆರೋಪಿಗಳು ನಾರಾಯಣರಾವ್ ಅವರನ್ನು ನಗರದ ಶುಕ್ಲತೀರ್ಥ ದೇವಸ್ಥಾನ ಪಕ್ಕದ ಕೋಟೆಯ ಹಿಂದುಗಡೆ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿ ಚೀಲದಲ್ಲಿ ಹಾಕಿ ಚರಂಡಿಯಲ್ಲಿ ಬೀಸಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರ ಮಾರ್ಗದರ್ಶನದಲ್ಲಿ ಸಿಪಿಐ ಡಿ.ಜಿ. ರಾಜಣ್ಣ ನೇತೃತ್ವದಲ್ಲಿ ರಚಿಸಲಾಗಿದ್ದ ಪ್ರತ್ಯೇಕ ತಂಡಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p>ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ ತಂಡಗಳ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಸೂಕ್ತ ಬಹುಮಾನ ಕೊಡಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ನಗರದ ಮೈಲೂರು ಶಾಸ್ತ್ರಿನಗರದ ಆರೋಗ್ಯ ಇಲಾಖೆಯ ನಿವೃತ್ತ ನೌಕರ ನಾರಾಯಣರಾವ್ ಮುಕಿಂದರಾವ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ನಗರದ ಅರ್ಕಟಗಲ್ಲಿಯ ಅಂಬ್ರೇಶ್ ಕೇಶವರಾವ್, ರಾಜಪೂತ್ ಕಾಲೊನಿಯ ಠಾಕೂರ್ ಸಚಿನ್ ಸಿಂಗ್ ಹಾಗೂ ಕುಂಬಾರವಾಡದ ವಿನೋದ ವೈಜಿನಾಥ ಬಂಧಿತ ಆರೋಪಿಗಳು.</p>.<p>ಫೆಬ್ರುವರಿ 12ರಂದು ಜಿಲ್ಲಾ ಆಸ್ಪತ್ರೆಯಿಂದ ಬೈಕ್ ಮೇಲೆ ಹೋಗಿದ್ದ ನಾರಾಯಣರಾವ್ ಮನೆಗೆ ತಲುಪದೆ ಕಾಣೆಯಾಗಿದ್ದರು. ಮರುದಿನ ಅವರ ಪತ್ನಿ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ನಾರಾಯಣರಾವ್ ಅವರನ್ನು ಕೊಲೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು.</p>.<p>‘ಆರೋಪಿಗಳು ನಾರಾಯಣರಾವ್ ಅವರನ್ನು ನಗರದ ಶುಕ್ಲತೀರ್ಥ ದೇವಸ್ಥಾನ ಪಕ್ಕದ ಕೋಟೆಯ ಹಿಂದುಗಡೆ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿ ಚೀಲದಲ್ಲಿ ಹಾಕಿ ಚರಂಡಿಯಲ್ಲಿ ಬೀಸಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರ ಮಾರ್ಗದರ್ಶನದಲ್ಲಿ ಸಿಪಿಐ ಡಿ.ಜಿ. ರಾಜಣ್ಣ ನೇತೃತ್ವದಲ್ಲಿ ರಚಿಸಲಾಗಿದ್ದ ಪ್ರತ್ಯೇಕ ತಂಡಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p>ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ ತಂಡಗಳ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಸೂಕ್ತ ಬಹುಮಾನ ಕೊಡಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>