<p><strong>ಔರಾದ್:</strong> ತಾಲ್ಲೂಕಿನ ಕೊಳ್ಳೂರ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.</p>.<p>ಗುರಯ್ಯ ಬಂಡಯ್ಯ ಸ್ವಾಮಿ(38) ಕೊಲೆಗೀಡಾದ ವ್ಯಕ್ತಿ. ಸಹೋದರ ಸಂಬಂಧಿ ಕಲ್ಲಯ್ಯ ಸ್ವಾಮಿ ಹಾಗೂ ಅವರ ಮಗನಾದ ವಿಜಯಕುಮಾರ ಸ್ವಾಮಿ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳ್ಳೂರ ಗ್ರಾಮದಲ್ಲಿ ಶನಿವಾರ ಸಂಜೆ ಹೊತ್ತು ಜಗಳ ಮಾಡಿಕೊಂಡ ಈ ಸೋಹದರ ಸಂಬಂಧಿಗಳು ಗುರಯ್ಯ ಸ್ವಾಮಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಸ್ಥಳದಲ್ಲಿದ್ದವರು ಅವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದರೂ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಘಟನೆ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಕೊಳ್ಳೂರ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ಕೊಳ್ಳೂರ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.</p>.<p>ಗುರಯ್ಯ ಬಂಡಯ್ಯ ಸ್ವಾಮಿ(38) ಕೊಲೆಗೀಡಾದ ವ್ಯಕ್ತಿ. ಸಹೋದರ ಸಂಬಂಧಿ ಕಲ್ಲಯ್ಯ ಸ್ವಾಮಿ ಹಾಗೂ ಅವರ ಮಗನಾದ ವಿಜಯಕುಮಾರ ಸ್ವಾಮಿ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳ್ಳೂರ ಗ್ರಾಮದಲ್ಲಿ ಶನಿವಾರ ಸಂಜೆ ಹೊತ್ತು ಜಗಳ ಮಾಡಿಕೊಂಡ ಈ ಸೋಹದರ ಸಂಬಂಧಿಗಳು ಗುರಯ್ಯ ಸ್ವಾಮಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಸ್ಥಳದಲ್ಲಿದ್ದವರು ಅವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದರೂ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಘಟನೆ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಕೊಳ್ಳೂರ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>