<p>ಬೀದರ್: ‘ಸಂಗೀತಕ್ಕೆ ಒತ್ತಡ ನಿವಾರಣೆಯ ಶಕ್ತಿ ಇದೆ. ಮನಸ್ಸಿಗೆ ನೆಮ್ಮದಿ ನೀಡುವ ಸಂಗೀತ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು’ ಎಂದು ಸಾಹಿತಿ ಎಂ.ಜಿ. ದೇಶಪಾಂಡೆ ಹೇಳಿದರು.</p>.<p>ಕೆಇಬಿ ಹನುಮಾನ ಮಂದಿರದಲ್ಲಿ ಮಗನೂರಿನ ಶ್ರೀ ದತ್ತಾತ್ರೇಯ ಭಜನಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಪ್ರಾಯೋಜಿತ ಸಂಗೀತ ಮತ್ತು ಜಾನಪದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅವಸರದ ಬದುಕಿನಲ್ಲಿ ಸಂಗೀತ, ಭಜನೆ, ಕೀರ್ತನೆ ಕೇಳುವುದರಿಂದ ಒಂದಿಷ್ಟು ನಮಗೆ ನೆಮ್ಮದಿ ಇರಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಹಾಸ್ಯ ಕಲಾವಿದರಾದ ಪ್ರಕಾಶ ಕುಲಕರ್ಣಿ ಮಾತನಾಡಿದರು. ನಾರಾಯಣ ಕಲಾಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಶ್ಯಾಮರಾವ್ ಕೆ ಬಿ, ಮಲ್ಲಿಕಾರ್ಜುನ ಪಾಟೀಲ, ಸುಭಾಷ ಅಲ್ಲಾಪುರ, ಕಲ್ಯಾಣರಾವ್ ಮರಕುಂದ ಕಾಡವಾದ, ಅನಿಲ್ ರೆಡ್ಡಿ ಮುಖ್ಯ ಅತಿಥಿಗಳಾಗಿದ್ದರು.</p>.<p>ತಬಲಾ ವಾದಕ ಜಗನ್ನಾಥ, ಮಾರೂತಿರಾವ್ ಖಾಜಾಪುರ, ಸುನೀಲ್ ಕೆಇಬಿ ಇದ್ದರು. ಜಯಪ್ರದಾ ಕುಲಕರ್ಣಿ ಸ್ವಾಗತಿಸಿದರು. ಗಂಗಮ್ಮ ನಿರೂಪಿಸಿದರು. ಪ್ರದೀಪ ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಸಂಗೀತಕ್ಕೆ ಒತ್ತಡ ನಿವಾರಣೆಯ ಶಕ್ತಿ ಇದೆ. ಮನಸ್ಸಿಗೆ ನೆಮ್ಮದಿ ನೀಡುವ ಸಂಗೀತ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು’ ಎಂದು ಸಾಹಿತಿ ಎಂ.ಜಿ. ದೇಶಪಾಂಡೆ ಹೇಳಿದರು.</p>.<p>ಕೆಇಬಿ ಹನುಮಾನ ಮಂದಿರದಲ್ಲಿ ಮಗನೂರಿನ ಶ್ರೀ ದತ್ತಾತ್ರೇಯ ಭಜನಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಪ್ರಾಯೋಜಿತ ಸಂಗೀತ ಮತ್ತು ಜಾನಪದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅವಸರದ ಬದುಕಿನಲ್ಲಿ ಸಂಗೀತ, ಭಜನೆ, ಕೀರ್ತನೆ ಕೇಳುವುದರಿಂದ ಒಂದಿಷ್ಟು ನಮಗೆ ನೆಮ್ಮದಿ ಇರಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಹಾಸ್ಯ ಕಲಾವಿದರಾದ ಪ್ರಕಾಶ ಕುಲಕರ್ಣಿ ಮಾತನಾಡಿದರು. ನಾರಾಯಣ ಕಲಾಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಶ್ಯಾಮರಾವ್ ಕೆ ಬಿ, ಮಲ್ಲಿಕಾರ್ಜುನ ಪಾಟೀಲ, ಸುಭಾಷ ಅಲ್ಲಾಪುರ, ಕಲ್ಯಾಣರಾವ್ ಮರಕುಂದ ಕಾಡವಾದ, ಅನಿಲ್ ರೆಡ್ಡಿ ಮುಖ್ಯ ಅತಿಥಿಗಳಾಗಿದ್ದರು.</p>.<p>ತಬಲಾ ವಾದಕ ಜಗನ್ನಾಥ, ಮಾರೂತಿರಾವ್ ಖಾಜಾಪುರ, ಸುನೀಲ್ ಕೆಇಬಿ ಇದ್ದರು. ಜಯಪ್ರದಾ ಕುಲಕರ್ಣಿ ಸ್ವಾಗತಿಸಿದರು. ಗಂಗಮ್ಮ ನಿರೂಪಿಸಿದರು. ಪ್ರದೀಪ ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>