ನಮ್ಮ ಪೂರ್ವಜರು ಯಾವುದೇ ಜಾತಿ ಭೇದ ಮಾಡದೆ ಹೋರಾಟ, ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. 70 ವರ್ಷಗಳಿಂದ ರಾಜಕೀಯ ಪಕ್ಷವೊಂದು ವೋಟ್ ಬ್ಯಾಂಕ್ಗಾಗಿ ಅನಗತ್ಯ ವಿಷಯಗಳನ್ನು ಚರ್ಚೆಗೆ ತಂದು, ಕೆಲ ಮುಖಂಡರನ್ನು ಬಳಸಿಕೊಂಡು ಹಿಂದೂ, ಮುಸ್ಲಿಂ ಹಾಗೂ ಇತರ ಕೋಮುಗಳ ಜನರಲ್ಲಿ ಭೇದ ಭಾವ ಸೃಷ್ಟಿಸಿ, ಎಲ್ಲ ಜಾತಿ, ಧರ್ಮಗಳ ಅಭಿವೃದ್ಧಿ ಮಾಡದೆ ಅಂತರ ಹೆಚ್ಚಿಸಿದೆ ಎಂದು ಟೀಕಿಸಿದರು.