<p><strong>ಬೀದರ್</strong>: ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎನ್ನಲಾದ ಮಹಾರಾಷ್ಟ್ರದ ಸಿತ್ರಾರ ಜಿಲ್ಲೆಯ ಪಂಚಲದ ರಾಮಗಿರಿ ಗುರು ನಾರಾಯಣಗಿರಿ ಮಹಾರಾಜ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಮುಸ್ಲಿಂ ಫೋರಂನಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಓಲ್ಡ್ ಸಿಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದರು. ರ್ಯಾಲಿಯುದ್ದಕ್ಕೂ ನಾರಾಯಣಗಿರಿ ಮಹಾರಾಜ್ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.</p>.<p>ಮಹಾರಾಷ್ಟ್ರದಲ್ಲಿ ಕೆಲ ದಿನಗಳ ಹಿಂದೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಾರಾಯಣಗಿರಿ ಮಹಾರಾಜ್ ಅವರು ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಅವರ ವಿರುದ್ಧ ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ರೀತಿಯ ಹೇಳಿಕೆಗಳಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ. ಈ ರೀತಿಯ ವರ್ತನೆಗೆ ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.</p>.<p>ಫೋರಂ ಮುಖಂಡರಾದ ಸೈಯದ್ ಸರ್ಫರಾಜ್ ಹೈಮಜ್, ಅಬ್ದುಲ್ ಅಜೀಜ್ ಮುನ್ನಾ, ಮಿರ್ಜಾ ಸೈಫುಲ್ಲಾ ಬೇಗ್, ವಸಿಮುದ್ದೀನ್ ಕೀರ್ಮಾನಿ, ಸೈಯದ್ ಮುಬಶೀರ್ ಅಲಿ, ಮೊಹಮ್ಮದ್ ಗೌಸೊದ್ದೀನ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎನ್ನಲಾದ ಮಹಾರಾಷ್ಟ್ರದ ಸಿತ್ರಾರ ಜಿಲ್ಲೆಯ ಪಂಚಲದ ರಾಮಗಿರಿ ಗುರು ನಾರಾಯಣಗಿರಿ ಮಹಾರಾಜ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಮುಸ್ಲಿಂ ಫೋರಂನಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಓಲ್ಡ್ ಸಿಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದರು. ರ್ಯಾಲಿಯುದ್ದಕ್ಕೂ ನಾರಾಯಣಗಿರಿ ಮಹಾರಾಜ್ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.</p>.<p>ಮಹಾರಾಷ್ಟ್ರದಲ್ಲಿ ಕೆಲ ದಿನಗಳ ಹಿಂದೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಾರಾಯಣಗಿರಿ ಮಹಾರಾಜ್ ಅವರು ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಅವರ ವಿರುದ್ಧ ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ರೀತಿಯ ಹೇಳಿಕೆಗಳಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ. ಈ ರೀತಿಯ ವರ್ತನೆಗೆ ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.</p>.<p>ಫೋರಂ ಮುಖಂಡರಾದ ಸೈಯದ್ ಸರ್ಫರಾಜ್ ಹೈಮಜ್, ಅಬ್ದುಲ್ ಅಜೀಜ್ ಮುನ್ನಾ, ಮಿರ್ಜಾ ಸೈಫುಲ್ಲಾ ಬೇಗ್, ವಸಿಮುದ್ದೀನ್ ಕೀರ್ಮಾನಿ, ಸೈಯದ್ ಮುಬಶೀರ್ ಅಲಿ, ಮೊಹಮ್ಮದ್ ಗೌಸೊದ್ದೀನ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>