ಸುರೇಶ ಚನಶೆಟ್ಟಿ ಐದು ವರ್ಷ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡ ಭವನದ ಅಡಿಗಲ್ಲು ಸಮಾರಂಭದಲ್ಲಿ ಚನಶೆಟ್ಟಿ ಮತ್ತೊಂದು ಅವಧಿಗೆ ಮುಂದುವರಿಯಬೇಕು ಎಂದು ಮೊದಲು ಪ್ರಸ್ತಾಪಿಸಿದ್ದೇ ನಾನು. ಚನಶೆಟ್ಟಿ ಅವರ ನಾಮಪತ್ರ ಸಲ್ಲಿಕೆ, ಕರಪತ್ರ ಬಿಡುಗಡೆ, ಚುನಾವಣೆ ಪ್ರಚಾರ ಸಭೆಯ ಅಧ್ಯಕ್ಷತೆ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ನಾನು ಸ್ವತಃ ಮುಂದೆ ಇದ್ದೆ. ಹೀಗಾಗಿ ಹೆಬ್ಬಾಳೆ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.